<p><strong>ನವದೆಹಲಿ:</strong> 1999ರಲ್ಲಿ ನಡೆದಿದ್ದೆಮಾಡೆಲ್ ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮನು ಶರ್ಮಾನನ್ನು ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.</p>.<p>ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಮನು ಶರ್ಮಾ ಸೇರಿದಂತೆ 18 ಅಪರಾಧಿಗಳ ಬಿಡುಗಡೆಗೆ ಅನುಮತಿ ನೀಡಿದ್ದರು. ಕಳೆದ ತಿಂಗಳು ಸಭೆ ಸೇರಿದ್ದ ತೀರ್ಪು ಪರಿಶೀಲನಾ ಮಂಡಳಿಯು ಶರ್ಮಾ ಸೇರಿದಂತೆ 18ಅಪರಾಧಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿ, ಶಿಫಾರಸನ್ನು ಬೈಜಲ್ಗೆ ಕಳುಹಿಸಿತ್ತು.</p>.<p>2019ರನವೆಂಬರ್ನಲ್ಲಿ ಮನು ಶರ್ಮಾ ಬಿಡುಗಡೆ ಕೋರಿ ದೆಹಲಿ ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿತ್ತು. ಈಗಾಗಲೇ 17 ವರ್ಷಗಳಕಾಲ ಸೆರೆವಾಸ ಅನುಭವಿಸಿರುವ ಮನು ಶರ್ಮಾ ಅವರನ್ನು ಉತ್ತಮ ನಡುವಳಿಕೆ ಹಿನ್ನೆಲೆಯಲ್ಲಿ ಬಿಡುಗಡೆಗೊಳಿಸಬೇಕೆಂದು ಮನವಿಯಲ್ಲಿ ಕೇಳಿಕೊಳ್ಳಲಾಗಿತ್ತು.</p>.<p>ಮನು ಶರ್ಮಾ ಪರ ವಕೀಲರ ಮನವಿಯನ್ನು ಪರಿಶೀಲಿಸಿದ್ದ ಮಂಡಳಿಯು ಉತ್ತಮ ನಡುವಳಿಕೆ ಹಿನ್ನೆಲೆಯಲ್ಲಿ ಶರ್ಮಾ ಬಿಡುಗಡೆಗೆ ತೀರ್ಮಾನಿಸಿತ್ತು.</p>.<p>1999ರ ಏಪ್ರಿಲ್ 30ರಂದು ನವದೆಹಲಿಯಲ್ಲಿ ನಡೆದ ಖಾಸಗಿ ಪಾರ್ಟಿಯೊಂದರಲ್ಲಿ ಮಾಡೆಲ್ ಜೆಸ್ಸಿಕಾ ಲಾಲ್ ತನಗೆ ಕುಡಿಯಲು ಮದ್ಯ ನೀಡಲಿಲ್ಲ ಎಂಬ ಕಾರಣಕ್ಕೆ ಮನು ಶರ್ಮಾ ಅವರ ಮೇಲೆ ಗುಂಡು ಹಾರಿಸಿ ಕೊಲೆಗೈದಿದ್ದ. ಆ ಪ್ರಕರಣ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. </p>.<p>ಹರಿಯಾಣದ ಅಂದಿನ ಪ್ರಭಾವಿ ರಾಜಕಾರಣಿ ವಿನೋದ್ ಶರ್ಮಾ ಪುತ್ರನಾದ ಮನು ಶರ್ಮಾನಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿತ್ತು.</p>.<p>ಜೀವಾವಧಿ ಶಿಕ್ಷೆ ಪೂರ್ಣಗೊಳ್ಳುವುದಕ್ಕೂ 3 ವರ್ಷ ಮೊದಲೇ ಮನು ಶರ್ಮಾ ಬಿಡುಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 1999ರಲ್ಲಿ ನಡೆದಿದ್ದೆಮಾಡೆಲ್ ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮನು ಶರ್ಮಾನನ್ನು ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.</p>.<p>ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಮನು ಶರ್ಮಾ ಸೇರಿದಂತೆ 18 ಅಪರಾಧಿಗಳ ಬಿಡುಗಡೆಗೆ ಅನುಮತಿ ನೀಡಿದ್ದರು. ಕಳೆದ ತಿಂಗಳು ಸಭೆ ಸೇರಿದ್ದ ತೀರ್ಪು ಪರಿಶೀಲನಾ ಮಂಡಳಿಯು ಶರ್ಮಾ ಸೇರಿದಂತೆ 18ಅಪರಾಧಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿ, ಶಿಫಾರಸನ್ನು ಬೈಜಲ್ಗೆ ಕಳುಹಿಸಿತ್ತು.</p>.<p>2019ರನವೆಂಬರ್ನಲ್ಲಿ ಮನು ಶರ್ಮಾ ಬಿಡುಗಡೆ ಕೋರಿ ದೆಹಲಿ ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿತ್ತು. ಈಗಾಗಲೇ 17 ವರ್ಷಗಳಕಾಲ ಸೆರೆವಾಸ ಅನುಭವಿಸಿರುವ ಮನು ಶರ್ಮಾ ಅವರನ್ನು ಉತ್ತಮ ನಡುವಳಿಕೆ ಹಿನ್ನೆಲೆಯಲ್ಲಿ ಬಿಡುಗಡೆಗೊಳಿಸಬೇಕೆಂದು ಮನವಿಯಲ್ಲಿ ಕೇಳಿಕೊಳ್ಳಲಾಗಿತ್ತು.</p>.<p>ಮನು ಶರ್ಮಾ ಪರ ವಕೀಲರ ಮನವಿಯನ್ನು ಪರಿಶೀಲಿಸಿದ್ದ ಮಂಡಳಿಯು ಉತ್ತಮ ನಡುವಳಿಕೆ ಹಿನ್ನೆಲೆಯಲ್ಲಿ ಶರ್ಮಾ ಬಿಡುಗಡೆಗೆ ತೀರ್ಮಾನಿಸಿತ್ತು.</p>.<p>1999ರ ಏಪ್ರಿಲ್ 30ರಂದು ನವದೆಹಲಿಯಲ್ಲಿ ನಡೆದ ಖಾಸಗಿ ಪಾರ್ಟಿಯೊಂದರಲ್ಲಿ ಮಾಡೆಲ್ ಜೆಸ್ಸಿಕಾ ಲಾಲ್ ತನಗೆ ಕುಡಿಯಲು ಮದ್ಯ ನೀಡಲಿಲ್ಲ ಎಂಬ ಕಾರಣಕ್ಕೆ ಮನು ಶರ್ಮಾ ಅವರ ಮೇಲೆ ಗುಂಡು ಹಾರಿಸಿ ಕೊಲೆಗೈದಿದ್ದ. ಆ ಪ್ರಕರಣ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. </p>.<p>ಹರಿಯಾಣದ ಅಂದಿನ ಪ್ರಭಾವಿ ರಾಜಕಾರಣಿ ವಿನೋದ್ ಶರ್ಮಾ ಪುತ್ರನಾದ ಮನು ಶರ್ಮಾನಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿತ್ತು.</p>.<p>ಜೀವಾವಧಿ ಶಿಕ್ಷೆ ಪೂರ್ಣಗೊಳ್ಳುವುದಕ್ಕೂ 3 ವರ್ಷ ಮೊದಲೇ ಮನು ಶರ್ಮಾ ಬಿಡುಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>