ಹಲವಾರು ಮಂದಿ ಕಟ್ಟಡದೊಳಗೆ ಉಸಿರುಗಟ್ಟಿ ಒದ್ದಾಡುತ್ತಿದ್ದಾಗ ಜೀವದ ಹಂಗು ತೊರೆದು ಶುಕ್ಲಾ ಆ ಕಟ್ಟಡದೊಳಗೆ ಪ್ರವೇಶಿಸಿದ್ದರು. ರಾಜೇಶ್ ಶುಕ್ಲಾ ಅವರ ಕಾರ್ಯವನ್ನು ಶ್ಲಾಘಿಸಿದ ದೆಹಲಿಯಸಚಿವ ಸತ್ಯೇಂದ್ರ ಜೈನ್, ಅಗ್ನಿಶಾಮಕ ದಳದ ಸಿಬ್ಬಂದಿ ರಾಜೇಶ್ ಶುಕ್ಲಾ ಅವರುನಿಜವಾದ ಹೀರೊ. ಉರಿಯುತ್ತಿರುವ ಕಟ್ಟಡದೊಳಗೆ ಮೊದಲು ಪ್ರವೇಶಿಸಿದ ಅವರು 11 ಮಂದಿಯ ಪ್ರಾಣ ಉಳಿಸಿದ್ದಾರೆ. ರಕ್ಷಣಾ ಕಾರ್ಯದ ನಡುವೆ ಅವರಿಗೆ ಗಾಯವಾದರೂ ಅದನ್ನು ಲೆಕ್ಕಿಸಿದೆ ಜನರ ರಕ್ಷಣೆ ಮಾಡಿದ್ದಾರೆ. ಈ ಧೀರನಿಗೆ ನಮನಗಳು ಎಂದು ಟ್ವೀಟಿಸಿದ್ದಾರೆ.