ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲೇಶ್‌–ಮಾಯಾವತಿ ನಾಳೆ ಜಂಟಿ ಪತ್ರಿಕಾಗೋಷ್ಠಿ: ಮೈತ್ರಿ ಘೊಷಣೆ ಸಾಧ್ಯತೆ

Last Updated 11 ಜನವರಿ 2019, 6:17 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್‌ ಯಾದವ್ ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ನಾಯಕಿ ಮಾಯಾವತಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದು ಮುಂಬರುವಲೋಕಸಭೆ ಚುನಾವಣೆಗೆ ಮೈತ್ರಿ ಘೋಷಿಸುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿ ಮಾಡಿಕೊಳ್ಳಲಿದ್ದು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ.

ಎಸ್‌ಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ಹಾಗೂ ಬಿಎಸ್‌ಪಿ ಕಾರ್ಯದರ್ಶಿ ಸತೀಶ್‌ ಚಂದ್ರ ಮಿಶ್ರಾ ಜಂಟಿ ಪತ್ರಿಕಾಗೋಷ್ಠಿ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡುಗೆಲುವು ಸಾಧಿಸಿದ್ದವು. ಈ ಹಿನ್ನೆಲೆಯಲ್ಲಿ 2019ರ ಚುನಾವಣೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದ್ದು ಸ್ಥಾನಗಳ ಹೊಂದಾಣಿಕೆ ಕುರಿತಂತೆ ಇನ್ನು ಚರ್ಚೆ ಯಾಗಿಲ್ಲ ಎಂದು ಸಮಾಜವಾದಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT