ರಾಜಕೀಯ ಪಕ್ಷವೊಂದರ ಚಿಹ್ನೆಗಳ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಹಣ ಬಳಸುವುದು ಸರಿಯಲ್ಲ. ಈ ಸ್ಮಾರಕಗಳ ನಿರ್ಮಾಣಕ್ಕೆ ತಗುಲಿದ ವೆಚ್ಚವನ್ನು ಮಾಯಾವತಿ ಅವರು ಖಜಾನೆಗೆ ವಾಪಸ್ ಮಾಡಬೇಕಾಗಬಹುದು. ಆದರೆ ಈ ವಿಚಾರದಲ್ಲಿ ಮತ್ತಷ್ಟು ವಿಚಾರಣೆಯ ಅಗತ್ಯವಿದೆ ಎಂದು ಹಿಂದಿನ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೇಳಿತ್ತು. ಅರ್ಜಿಯ ಮುಂದಿನ ವಿಚಾರಣೆ ಏಪ್ರಿಲ್ 2ರಂದು ನಡೆಯಲಿದೆ.