ಲಖನೌದ ಸರ್ಕಾರಿ ಅತಿಥಿಗೃಹದಲ್ಲಿ 1995ರಲ್ಲಿ ಎಸ್ಪಿ ಕಾರ್ಯಕರ್ತರು ಮಾಯಾವತಿ ಮೇಲೆ ನಡೆಸಿದ ದಾಳಿಯನ್ನು ಪ್ರಸ್ತಾಪಿಸಿರುವ ಸಿಂಗ್, ‘ಅಧಿಕಾರಕ್ಕಾಗಿ ಅವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. ತಮ್ಮ ಮೇಲೆ ದಾಳಿ ನಡೆಸಿದ, ಒಂದು ಕಾಲದ ಬದ್ಧ ವೈರಿಗಳಾಗಿದ್ದ ಸಮಾಜವಾದಿ ಪಕ್ಷವನ್ನು ಅಪ್ಪಿಕೊಂಡಿದ್ದಾರೆ. ಮೌಲ್ಯಗಳು ಹಾಗೂ ಘನತೆಯನ್ನು ಗಾಳಿಗೆ ತೂರಿದ್ದಾರೆ’ ಎಂದು ಆಪಾದಿಸಿದ್ದಾರೆ.