<p><strong>ಲಖನೌ:</strong> ಬಿಎಸ್ಪಿ ಮುಖ್ಯಸ್ಥೆ, ಉತ್ತರ ಪ್ರದೇಶ ರಾಜಕಾರಣಿ ಮಾಯಾವತಿ(63) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಏಪ್ರಿಲ್ –ಮೇನಲ್ಲಿ ನಿಗದಿಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ.</p>.<p>’ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ನಿರ್ಧಾರವನ್ನು ನನ್ನ ಪಕ್ಷ ಅರ್ಥೈಸಿಕೊಳ್ಳುತ್ತದೆ ಎಂಬ ಭರವಸೆಯಿದೆ. ಸಮಾಜವಾದಿ ಪಕ್ಷದ ಜತೆಗಿನ ಮೈತ್ರಿ ಉತ್ತಮವಾಗಿದೆ. ಕ್ಷೇತ್ರವನ್ನು ಬಿಟ್ಟು, ಅಗತ್ಯವಾದರೆ ಮುಂದಿನ ದಿನಗಳಲ್ಲಿ ಸ್ಪರ್ಧಿಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಬುಧವಾರ ಹೇಳಿದ್ದಾರೆ.</p>.<p>ಬಹುಜನ ಸಮಾಜವಾದಿ ಪಾರ್ಟಿಯು ಲೋಕಸಭಾ ಚುನಾವಣೆಗಾಗಿ ವಿರೋಧ ಪಕ್ಷ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಸಾಧಿಸಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ದೂಳೀಪಟ ಮಾಡಲು ಯೋಜನೆ ರೂಪಿಸಿದೆ.</p>.<p>ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಮಾಯಾವತಿ, 1994ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಖಿಲೇಶ್ ಯಾದವ್ ಮತ್ತು ಮಾಯಾವತಿ ಜತೆಯಾಗಿ ಕಾರ್ಯತಂತ್ರದೊಂದಿಗೆ ಜೋರು ಪ್ರಚಾರ ನಡೆಸುವ ಮೂಲಕ ಮೈತ್ರಿಗೆ ಅತಿ ಹೆಚ್ಚು ಸ್ಥಾನ ಗಳಿಸಲು ಕಂಕಣಬದ್ಧರಾಗಿದ್ದಾರೆ.</p>.<p>ದಲಿತ ನಾಯಕಿ ಮಾಯಾವತಿ ಅವರ ಬಿಎಸ್ಪಿ, 2014ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳ ಪೈಕಿ ಕನಿಷ್ಠ ಒಂದು ಸ್ಥಾನವನ್ನು ಪಡೆಯಲೂ ಸಾಧ್ಯವಾಗಲಿಲ್ಲ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಶೇ 20ರಷ್ಟು ಮತಗಳನ್ನು ಗಳಿಸಿಕೊಂಡಿತ್ತು ಹಾಗೂ ಬಹುತೇಕ ಕ್ಷೇತ್ರಗಳಲ್ಲಿ ಮತಗಳಿಕೆಯಲ್ಲಿ ಮೂರನೇ ಸ್ಥಾನದಲ್ಲಿತ್ತು.</p>.<p>ಕಳೆದ ಉಪಚುನಾವಣೆಯಲ್ಲಿ ಬಿಎಸ್ಪಿ–ಎಸ್ಪಿ ಮೈತ್ರಿ ಗೆಲುವಿನ ನಗೆ ಬೀರಿತ್ತು. ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಮತಗಳಿಕೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾಗೆ ಜವಾಬ್ದಾರಿ ವಹಿಸಿದ್ದು, ಇದರಿಂದ ಮತಗಳಲ್ಲಿ ವಿಭಜನೆಯಾಗುವ ಸಾಧ್ಯತೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಬಿಎಸ್ಪಿ ಮುಖ್ಯಸ್ಥೆ, ಉತ್ತರ ಪ್ರದೇಶ ರಾಜಕಾರಣಿ ಮಾಯಾವತಿ(63) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಏಪ್ರಿಲ್ –ಮೇನಲ್ಲಿ ನಿಗದಿಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ.</p>.<p>’ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ನಿರ್ಧಾರವನ್ನು ನನ್ನ ಪಕ್ಷ ಅರ್ಥೈಸಿಕೊಳ್ಳುತ್ತದೆ ಎಂಬ ಭರವಸೆಯಿದೆ. ಸಮಾಜವಾದಿ ಪಕ್ಷದ ಜತೆಗಿನ ಮೈತ್ರಿ ಉತ್ತಮವಾಗಿದೆ. ಕ್ಷೇತ್ರವನ್ನು ಬಿಟ್ಟು, ಅಗತ್ಯವಾದರೆ ಮುಂದಿನ ದಿನಗಳಲ್ಲಿ ಸ್ಪರ್ಧಿಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಬುಧವಾರ ಹೇಳಿದ್ದಾರೆ.</p>.<p>ಬಹುಜನ ಸಮಾಜವಾದಿ ಪಾರ್ಟಿಯು ಲೋಕಸಭಾ ಚುನಾವಣೆಗಾಗಿ ವಿರೋಧ ಪಕ್ಷ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಸಾಧಿಸಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ದೂಳೀಪಟ ಮಾಡಲು ಯೋಜನೆ ರೂಪಿಸಿದೆ.</p>.<p>ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಮಾಯಾವತಿ, 1994ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಖಿಲೇಶ್ ಯಾದವ್ ಮತ್ತು ಮಾಯಾವತಿ ಜತೆಯಾಗಿ ಕಾರ್ಯತಂತ್ರದೊಂದಿಗೆ ಜೋರು ಪ್ರಚಾರ ನಡೆಸುವ ಮೂಲಕ ಮೈತ್ರಿಗೆ ಅತಿ ಹೆಚ್ಚು ಸ್ಥಾನ ಗಳಿಸಲು ಕಂಕಣಬದ್ಧರಾಗಿದ್ದಾರೆ.</p>.<p>ದಲಿತ ನಾಯಕಿ ಮಾಯಾವತಿ ಅವರ ಬಿಎಸ್ಪಿ, 2014ರ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳ ಪೈಕಿ ಕನಿಷ್ಠ ಒಂದು ಸ್ಥಾನವನ್ನು ಪಡೆಯಲೂ ಸಾಧ್ಯವಾಗಲಿಲ್ಲ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಶೇ 20ರಷ್ಟು ಮತಗಳನ್ನು ಗಳಿಸಿಕೊಂಡಿತ್ತು ಹಾಗೂ ಬಹುತೇಕ ಕ್ಷೇತ್ರಗಳಲ್ಲಿ ಮತಗಳಿಕೆಯಲ್ಲಿ ಮೂರನೇ ಸ್ಥಾನದಲ್ಲಿತ್ತು.</p>.<p>ಕಳೆದ ಉಪಚುನಾವಣೆಯಲ್ಲಿ ಬಿಎಸ್ಪಿ–ಎಸ್ಪಿ ಮೈತ್ರಿ ಗೆಲುವಿನ ನಗೆ ಬೀರಿತ್ತು. ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಮತಗಳಿಕೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾಗೆ ಜವಾಬ್ದಾರಿ ವಹಿಸಿದ್ದು, ಇದರಿಂದ ಮತಗಳಲ್ಲಿ ವಿಭಜನೆಯಾಗುವ ಸಾಧ್ಯತೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>