ಒಡಿಶಾದಿಂದ ಆಗಮಿಸಿರುವ ನುರಿತ ಅಗ್ನಿಶಾಮಕ ಸಿಬ್ಬಂದಿಗಳು ಬೆಳಗ್ಗೆಯಿಂದ 10 ಪಂಪ್ಗಳ ಮೂಲಕ ನೀರನ್ನು ಹೊರಹಾಕುತ್ತಿದ್ದಾರೆ. ಅಲ್ಲಲ್ಲಿ ಕೆಸರು ಸಿಗುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಕಾರ್ಮಿಕರ ಮೂರು ಹೆಲ್ಮೆಟ್ಗಳು ದೊರೆತಿದ್ದು ಇಲ್ಲಿಯವರೆಗೂ ಗಣಿಯಲ್ಲಿ ಸಿಲುಕಿರುವವರ ಯಾವುದೇ ಕುರುಹು ಪತ್ತೆಯಾಗಿಲ್ಲ. ಕಳೆದ 16 ದಿನಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.