ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಅನ್ನು ಸರ್ಕಾರಿ ಸ್ವಾಮ್ಯದ ಉದ್ದಿಮೆಯಾಗಿ ಪರಿಗಣಿಸುವ ನಿರ್ಧಾರ ಕೈಗೊಂಡಿರುವುದು, ರಾಜ್ಯದ ವಿಶೇಷ ಸ್ಥಾನಮಾನವನ್ನುಇಲ್ಲವಾಗಿಸುವ ಯತ್ನದ ಭಾಗವಾಗಿ’ ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಆರೋಪಿಸಿದ್ದಾರೆ.
ರಾಜ್ಯಪಾಲರ ನೇತೃತ್ವದ ರಾಜ್ಯ ಆಡಳಿತ ಮಂಡಳಿ ತೆಗೆದುಕೊಂಡಿರುವ ಈ ನಿರ್ಧಾರವನ್ನು ಕೂಡಲೇ ಹಿಂದೆಗೆದುಕೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
‘ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಮನಗಂಡು ಪಿಡಿಪಿಯು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಲು ಮುಂದಾಗಿತ್ತು ಎಂದು ಮೆಹಬೂಬಾ ಹೇಳಿದ್ದಾರೆ.