ಕೊಯಮತ್ತೂರು: ಮೇಕೆದಾಟು ಯೋಜನೆ ಸಂಬಂಧ ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆಯುವಂತೆ ಪಿಎಂಕೆ ಶನಿವಾರ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.
ಮೇಕೆದಾಟು ಯೋಜನೆ ವಿಷಯದಲ್ಲಿ ಕರ್ನಾಟಕದ ನಿಲುವನ್ನು ವಿರೋಧಿಸಿ ತಮಿಳುನಾಡಿನ ಎಲ್ಲ ಶಾಸಕರು ಮತ್ತು ಸಂಸದರು ಸಂಸತ್ ಎದುರು ಪ್ರತಿಭಟನೆ ನಡೆಸುವಂತೆ ಪಿಎಂಕೆ ಯುವ ಘಟಕದ ಅಧ್ಯಕ್ಷ ಮತ್ತು ಸಂಸದ ಅನ್ಬುಮಣಿ ರಾಮದಾಸ್ ಒತ್ತಾಯಿಸಿದ್ದಾರೆ.