ಬುಧವಾರ ಸಂಜೆ ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಒಂದು ಗಂಟೆ ಕಾಲ ಚರ್ಚಿಸಿದ ಅವರು, ‘ವಾಸ್ತವವಾಗಿ ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲ ಆಗಲಿದೆ ಎಂಬ ವಿಷಯ ನನಗೆ ಮನವರಿಕೆಯಾಗಿದೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುವ ಉದ್ದೇಶದಿಂದ ಶೀಘ್ರವೇ ಸಭೆ ಆಯೋಜಿಸಲಾಗುವುದು’ ಎಂದರು.