<p><strong>ನವದೆಹಲಿ:</strong> ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಲೋಕಸಭೆಯಲ್ಲಿ ಬುಧವಾರ ಎಐಎಡಿಎಂಕೆ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದು, ಯೋಜನೆಯ ಪರ ರಾಜ್ಯದ ಸಂಸದರು ದನಿ ಎತ್ತಿದರು.</p>.<p>ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಎಐಎಡಿಎಂಕೆ ಸದಸ್ಯರು ಭಿತ್ತಿಪತ್ರ ಹಿಡಿದು ಸ್ಪೀಕರ್ ಎದುರಿನ ಜಾಗಕ್ಕೆ ಧಾವಿಸಿ ಘೋಷಣೆ ಕೂಗಲಾರಂಭಿಸಿದರು. ತಕ್ಷಣವೇ ರಾಜ್ಯದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೂ ‘ಬೇಕೇ ಬೇಕು ಮೇಕೆದಾಟು’ ಎಂಬ ಘೋಷಣೆ ಕೂಗಿದರು.</p>.<p>ಕಾಂಗ್ರೆಸ್ನ ಆರ್.ಧ್ರುವನಾರಾಯಣ, ಎಸ್.ಪಿ. ಮುದ್ದಹನುಮೇಗೌಡ, ಕೆ.ಎಚ್. ಮುನಿಯಪ್ಪ, ವಿ.ಎಸ್. ಉಗ್ರಪ್ಪ, ಜೆಡಿಎಸ್ನ<br />ಎಲ್.ಆರ್. ಶಿವರಾಮೇಗೌಡ ಅವರು ಸ್ಪೀಕರ್ ಎದುರಿನ ಜಾಗಕ್ಕೆ ಬಂದು ಘೋಷಣೆ ಕೂಗಿದರೆ, ಬಿಜೆಪಿಯ ಸುರೇಶ ಅಂಗಡಿ, ಸಂಗಣ್ಣ ಕರಡಿ, ಪಿ.ಸಿ. ಗದ್ದಿಗೌಡರ್ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಮೇಕೆದಾಟು ಪರ ದನಿ ಎತ್ತಿದರು.</p>.<p>ಸಂಸತ್ನ ಚಳಿಗಾಲದ ಅಧಿವೇಶನದ ಆರಂಭದಿಂದಲೂ ತಮಿಳುನಾಡಿನ ಸಂಸದರು, ‘ಮೇಕೆದಾಟು ಯೋಜನೆಗೆ ಅನುಮತಿ ಬೇಡ’ ಎಂದು ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸುತ್ತಿದ್ದರೆ, ರಾಜ್ಯದ ಸಂಸದರು ಯೋಜನೆಯ ಪರ ಬುಧವಾರ ಪ್ರತಿಭಟನೆ ಆರಂಭಿಸಿದರು.</p>.<p><strong>ಸಂಸದರಿಗೆ ಮಾಹಿತಿ:</strong> ತಮಿಳುನಾಡಿನ ಸಂಸದರು ತಪ್ಪು ತಿಳಿವಳಿಕೆಯಿಂದ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದು, ಸಂಸತ್ನಲ್ಲಿ ಹೋರಾಟ ರೂಪಿಸುವ ನಿಟ್ಟಿನಲ್ಲಿ ರಾಜ್ಯದ ಸಂಸದರಿಗೆ ಮನವಿ ಮಾಡಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ರಾಜ್ಯದ ಎಲ್ಲ ಪಕ್ಷಗಳ ಸಂಸದರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದರು.</p>.<p>ಯೋಜನೆಯಿಂದ ಎರಡೂ ರಾಜ್ಯಗಳಿಗೆ ನೆರವಾಗಲಿದೆ. ಕರ್ನಾಟಕಕ್ಕಿಂತ ತಮಿಳುನಾಡಿಗೆ ಅಧಿಕ ಲಾಭ ಆಗಲಿದೆ. ಈ ಕುರಿತು ತಮಿಳುನಾಡಿನ ಸಂಸದರಿಗೆ ಸಂಪೂರ್ಣ ಅರಿವಿದೆ. ಆದರೂ ಅವರು ಅನಗತ್ಯವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದ ಅವರು ಹೇಳಿದರು.</p>.<p>ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಅನಂತಕುಮಾರ್ ಹೆಗಡೆ ಹಾಗೂ ಕೆಲವು ಸಂಸದರನ್ನು ಅವರು ಬುಧವಾರ ಭೇಟಿ ಮಾಡಿ ಈ ಕುರಿತು ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಲೋಕಸಭೆಯಲ್ಲಿ ಬುಧವಾರ ಎಐಎಡಿಎಂಕೆ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದು, ಯೋಜನೆಯ ಪರ ರಾಜ್ಯದ ಸಂಸದರು ದನಿ ಎತ್ತಿದರು.</p>.<p>ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಎಐಎಡಿಎಂಕೆ ಸದಸ್ಯರು ಭಿತ್ತಿಪತ್ರ ಹಿಡಿದು ಸ್ಪೀಕರ್ ಎದುರಿನ ಜಾಗಕ್ಕೆ ಧಾವಿಸಿ ಘೋಷಣೆ ಕೂಗಲಾರಂಭಿಸಿದರು. ತಕ್ಷಣವೇ ರಾಜ್ಯದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೂ ‘ಬೇಕೇ ಬೇಕು ಮೇಕೆದಾಟು’ ಎಂಬ ಘೋಷಣೆ ಕೂಗಿದರು.</p>.<p>ಕಾಂಗ್ರೆಸ್ನ ಆರ್.ಧ್ರುವನಾರಾಯಣ, ಎಸ್.ಪಿ. ಮುದ್ದಹನುಮೇಗೌಡ, ಕೆ.ಎಚ್. ಮುನಿಯಪ್ಪ, ವಿ.ಎಸ್. ಉಗ್ರಪ್ಪ, ಜೆಡಿಎಸ್ನ<br />ಎಲ್.ಆರ್. ಶಿವರಾಮೇಗೌಡ ಅವರು ಸ್ಪೀಕರ್ ಎದುರಿನ ಜಾಗಕ್ಕೆ ಬಂದು ಘೋಷಣೆ ಕೂಗಿದರೆ, ಬಿಜೆಪಿಯ ಸುರೇಶ ಅಂಗಡಿ, ಸಂಗಣ್ಣ ಕರಡಿ, ಪಿ.ಸಿ. ಗದ್ದಿಗೌಡರ್ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಮೇಕೆದಾಟು ಪರ ದನಿ ಎತ್ತಿದರು.</p>.<p>ಸಂಸತ್ನ ಚಳಿಗಾಲದ ಅಧಿವೇಶನದ ಆರಂಭದಿಂದಲೂ ತಮಿಳುನಾಡಿನ ಸಂಸದರು, ‘ಮೇಕೆದಾಟು ಯೋಜನೆಗೆ ಅನುಮತಿ ಬೇಡ’ ಎಂದು ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸುತ್ತಿದ್ದರೆ, ರಾಜ್ಯದ ಸಂಸದರು ಯೋಜನೆಯ ಪರ ಬುಧವಾರ ಪ್ರತಿಭಟನೆ ಆರಂಭಿಸಿದರು.</p>.<p><strong>ಸಂಸದರಿಗೆ ಮಾಹಿತಿ:</strong> ತಮಿಳುನಾಡಿನ ಸಂಸದರು ತಪ್ಪು ತಿಳಿವಳಿಕೆಯಿಂದ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದು, ಸಂಸತ್ನಲ್ಲಿ ಹೋರಾಟ ರೂಪಿಸುವ ನಿಟ್ಟಿನಲ್ಲಿ ರಾಜ್ಯದ ಸಂಸದರಿಗೆ ಮನವಿ ಮಾಡಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ರಾಜ್ಯದ ಎಲ್ಲ ಪಕ್ಷಗಳ ಸಂಸದರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದರು.</p>.<p>ಯೋಜನೆಯಿಂದ ಎರಡೂ ರಾಜ್ಯಗಳಿಗೆ ನೆರವಾಗಲಿದೆ. ಕರ್ನಾಟಕಕ್ಕಿಂತ ತಮಿಳುನಾಡಿಗೆ ಅಧಿಕ ಲಾಭ ಆಗಲಿದೆ. ಈ ಕುರಿತು ತಮಿಳುನಾಡಿನ ಸಂಸದರಿಗೆ ಸಂಪೂರ್ಣ ಅರಿವಿದೆ. ಆದರೂ ಅವರು ಅನಗತ್ಯವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದ ಅವರು ಹೇಳಿದರು.</p>.<p>ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಅನಂತಕುಮಾರ್ ಹೆಗಡೆ ಹಾಗೂ ಕೆಲವು ಸಂಸದರನ್ನು ಅವರು ಬುಧವಾರ ಭೇಟಿ ಮಾಡಿ ಈ ಕುರಿತು ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>