‘ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಸರ್ಕಾರವು ಈಗ ಬಡತನ ನಿರ್ಮೂಲನೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆ ಅವುಗಳಲ್ಲಿ ಒಂದು. ಈ ಯೋಜನೆಗಳಿಂದ ಬಡತನ ನಿರ್ಮೂಲನೆಯಾಗಲಿದೆ. ಆಗ ಉದ್ಯೋಗ ಖಾತರಿ ಯೋಜನೆ ಅಪ್ರಸ್ತುತವಾಗುತ್ತದೆ. ಹೀಗಾಗಿ ಅದನ್ನು ಸದಾ ಮುಂದುವರಿಸಿಕೊಂಡು ಹೋಗುವ ಅವಶ್ಯಕತೆಯಿಲ್ಲ’ ಎಂದು ಅವರು ಹೇಳಿದ್ದಾರೆ.