<p><strong>ಮುಂಬೈ:</strong> ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿಕೆಯನ್ನು ಶಿವಸೇನಾ ಅನುಮೋದಿಸಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳನ್ನು ಅವಲಂಬಿಸುವುದು ಅನಿವಾರ್ಯ ಎಂದಿದೆ.</p>.<p>‘2014ರ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಕ್ಕಿತ್ತು. ಆದರೆ, ಈ ಬಾರಿ ಅಷ್ಟು ಸ್ಥಾನ ಗೆಲ್ಲುವುದು ಕಷ್ಟ’ ಎಂದುಶಿವಸೇನಾದ ಹಿರಿಯ ನಾಯಕ ಸಂಜಯ ರಾವತ್ ಪ್ರತಿಪಾದಿಸಿದರು.</p>.<p>‘ರಾಮ್ ಮಾಧವ್ ಹೇಳಿರುವುದು ಸರಿ. ಎನ್ಡಿಎ ಮುಂದಿನ ಸರ್ಕಾರ ರಚಿಸಲಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸದ್ಯದ ಸ್ಥಿತಿಯಲ್ಲಿ ಬಿಜೆಪಿ ಏಕಾಂಗಿಯಾಗಿ 280–282 ಸ್ಥಾನ ಗೆಲ್ಲುವುದು ಕಷ್ಟ. ಆದರೆ, ಎನ್ಡಿಎ ‘ಪರಿವಾರ’ ಈ ಗಡಿ ದಾಟಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಹಾಲಿ ಲೋಕಸಭೆಯಲ್ಲಿ 18 ಸಂಸದರನ್ನು ಹೊಂದಿರುವ ಶಿವಸೇನಾ, ಎನ್ಡಿಎಯ ಭಾಗವಾಗಿದೆ. ಅಲ್ಲದೆ, ಮಹಾರಾಷ್ಟ್ರದಲ್ಲೂ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿಕೆಯನ್ನು ಶಿವಸೇನಾ ಅನುಮೋದಿಸಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳನ್ನು ಅವಲಂಬಿಸುವುದು ಅನಿವಾರ್ಯ ಎಂದಿದೆ.</p>.<p>‘2014ರ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಕ್ಕಿತ್ತು. ಆದರೆ, ಈ ಬಾರಿ ಅಷ್ಟು ಸ್ಥಾನ ಗೆಲ್ಲುವುದು ಕಷ್ಟ’ ಎಂದುಶಿವಸೇನಾದ ಹಿರಿಯ ನಾಯಕ ಸಂಜಯ ರಾವತ್ ಪ್ರತಿಪಾದಿಸಿದರು.</p>.<p>‘ರಾಮ್ ಮಾಧವ್ ಹೇಳಿರುವುದು ಸರಿ. ಎನ್ಡಿಎ ಮುಂದಿನ ಸರ್ಕಾರ ರಚಿಸಲಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸದ್ಯದ ಸ್ಥಿತಿಯಲ್ಲಿ ಬಿಜೆಪಿ ಏಕಾಂಗಿಯಾಗಿ 280–282 ಸ್ಥಾನ ಗೆಲ್ಲುವುದು ಕಷ್ಟ. ಆದರೆ, ಎನ್ಡಿಎ ‘ಪರಿವಾರ’ ಈ ಗಡಿ ದಾಟಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಹಾಲಿ ಲೋಕಸಭೆಯಲ್ಲಿ 18 ಸಂಸದರನ್ನು ಹೊಂದಿರುವ ಶಿವಸೇನಾ, ಎನ್ಡಿಎಯ ಭಾಗವಾಗಿದೆ. ಅಲ್ಲದೆ, ಮಹಾರಾಷ್ಟ್ರದಲ್ಲೂ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>