ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಮನೆಗೆ ಮರಳಿದ ವಲಸೆ ಕಾರ್ಮಿಕ ಆತ್ಮಹತ್ಯೆ

Last Updated 12 ಜೂನ್ 2020, 7:19 IST
ಅಕ್ಷರ ಗಾತ್ರ

ಬಲಿಯಾ: ಲಾಕ್‌ಡೌನ್‌ನಿಂದ ಉತ್ತರಾಖಂಡದಲ್ಲಿ ಸಿಲುಕಿದ್ದ 30 ವರ್ಷ ವಯಸ್ಸಿನ ವಲಸೆ ಕಾರ್ಮಿಕ ಗುರುವಾರ ಉತ್ತರ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ತಿಂಗಳಷ್ಟೇ ತನ್ನ ಊರಿಗೆ ಮರಳಿದ್ದ ಅಂಜನಿ ಕುಮಾರ್‌ ಸಿಂಗ್‌ ಮರಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಂಡಿದ್ದಾರೆ. ಅವರ ಕುಟುಂಬ ಸದಸ್ಯರ ಪ್ರಕಾರ, ಹಣಕಾಸು ಬಿಕ್ಕಟ್ಟು ಆತನನ್ನು ಪ್ರಾಣ ಕಳೆದುಕೊಳ್ಳುವಂತೆ ಮಾಡಿದೆ.

ಉತ್ತರಾಖಂಡದ ಹರಿದ್ವಾರದ ಕಂಪನಿಯೊಂದರಲ್ಲಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದರು. ಹದಿನೈದು ದಿನಗಳ ಹಿಂದಷ್ಟೇ ಮಠ ಯೋಗೇಂದ್ರ ಗಿರಿ ಗ್ರಾಮದ ತನ್ನ ಮನೆಗೆ ಹಿಂದಿರುಗಿದ್ದರು. ದೇಹವನ್ನು ಶವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT