ಹೈದರಾಬಾದ್: ಲಾಕ್ಡೌನ್ ಹಿನ್ನೆಲೆಯಲ್ಲಿ ತೆಲಂಗಾಣದಿಂದ 300 ಕಿ.ಮೀ ದೂರ ನಡೆದುಕೊಂಡು ಹೊರಟಿದ್ದ ಒಡಿಶಾದ 21 ವರ್ಷದ ಕಾರ್ಮಿಕನೊಬ್ಬ ಬಿಸಿಲ ಬೇಗೆಗೆ ಬಸವಳಿದು ಮೃತಪಟ್ಟಿದ್ದಾನೆ.
ಮೃತ ಕಾರ್ಮಿಕ ಸೇಹ್ನಿತರೊಂದಿಗೆ ಹೈದರಾಬಾದ್ನಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದು, ಒಡಿಶಾದ ಮಲ್ಕಂಗಿರಿ ಜಿಲ್ಲೆಗೆ ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರಾಚಲಂ ತಲುಪಿದಾಗ ಕಾರ್ಮಿಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವಾಂತಿ ಮಾಡಿಕೊಂಡು ರಸ್ತೆಯಲ್ಲೇ ಕುಸಿದುಬಿದ್ದಿದ್ದಾನೆ ಎಂದು ಸ್ನೇಹಿತರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರ್ಮಿಕ ಬಿಸಿಲಿನ ತೀವ್ರತೆಗೆ ಬಳಲಿ ಮೃತಪಟ್ಟಿರಬಹುದು ಎಂದು ಆಸ್ಪತ್ರೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಇತ್ತ,ಗುಂಪಿನಲ್ಲಿದ್ದ ಸ್ನೇಹಿತರು ಸೋಮವಾರ ಮಧ್ಯಾಹ್ನದಿಂದ ಏನನ್ನೂ ತಿಂದಿರಲಿಲ್ಲ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಕಾರ್ಮಿಕನಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತದೇಹವನ್ನು ಮಲ್ಕಂಗಿರಿಗೆ ಕೊಂಡೊಯ್ಯಲು ವಾಹನ ವ್ಯವಸ್ಥೆ ಮಾಡಿದ್ದಾರೆ.