<p><strong>ಹೈದರಾಬಾದ್:</strong> ಲಾಕ್ಡೌನ್ ಹಿನ್ನೆಲೆಯಲ್ಲಿ ತೆಲಂಗಾಣದಿಂದ 300 ಕಿ.ಮೀ ದೂರ ನಡೆದುಕೊಂಡು ಹೊರಟಿದ್ದ ಒಡಿಶಾದ 21 ವರ್ಷದ ಕಾರ್ಮಿಕನೊಬ್ಬ ಬಿಸಿಲ ಬೇಗೆಗೆ ಬಸವಳಿದು ಮೃತಪಟ್ಟಿದ್ದಾನೆ.</p>.<p>ಮೃತ ಕಾರ್ಮಿಕ ಸೇಹ್ನಿತರೊಂದಿಗೆ ಹೈದರಾಬಾದ್ನಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದು, ಒಡಿಶಾದ ಮಲ್ಕಂಗಿರಿ ಜಿಲ್ಲೆಗೆ ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭದ್ರಾಚಲಂ ತಲುಪಿದಾಗ ಕಾರ್ಮಿಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವಾಂತಿ ಮಾಡಿಕೊಂಡು ರಸ್ತೆಯಲ್ಲೇ ಕುಸಿದುಬಿದ್ದಿದ್ದಾನೆ ಎಂದು ಸ್ನೇಹಿತರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕಾರ್ಮಿಕ ಬಿಸಿಲಿನ ತೀವ್ರತೆಗೆ ಬಳಲಿ ಮೃತಪಟ್ಟಿರಬಹುದು ಎಂದು ಆಸ್ಪತ್ರೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಇತ್ತ,ಗುಂಪಿನಲ್ಲಿದ್ದ ಸ್ನೇಹಿತರು ಸೋಮವಾರ ಮಧ್ಯಾಹ್ನದಿಂದ ಏನನ್ನೂ ತಿಂದಿರಲಿಲ್ಲ ಎಂದು ತಿಳಿಸಿದ್ದಾರೆ.</p>.<p>ಘಟನೆ ಕುರಿತು ಕಾರ್ಮಿಕನಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತದೇಹವನ್ನು ಮಲ್ಕಂಗಿರಿಗೆ ಕೊಂಡೊಯ್ಯಲು ವಾಹನ ವ್ಯವಸ್ಥೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಲಾಕ್ಡೌನ್ ಹಿನ್ನೆಲೆಯಲ್ಲಿ ತೆಲಂಗಾಣದಿಂದ 300 ಕಿ.ಮೀ ದೂರ ನಡೆದುಕೊಂಡು ಹೊರಟಿದ್ದ ಒಡಿಶಾದ 21 ವರ್ಷದ ಕಾರ್ಮಿಕನೊಬ್ಬ ಬಿಸಿಲ ಬೇಗೆಗೆ ಬಸವಳಿದು ಮೃತಪಟ್ಟಿದ್ದಾನೆ.</p>.<p>ಮೃತ ಕಾರ್ಮಿಕ ಸೇಹ್ನಿತರೊಂದಿಗೆ ಹೈದರಾಬಾದ್ನಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದು, ಒಡಿಶಾದ ಮಲ್ಕಂಗಿರಿ ಜಿಲ್ಲೆಗೆ ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭದ್ರಾಚಲಂ ತಲುಪಿದಾಗ ಕಾರ್ಮಿಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವಾಂತಿ ಮಾಡಿಕೊಂಡು ರಸ್ತೆಯಲ್ಲೇ ಕುಸಿದುಬಿದ್ದಿದ್ದಾನೆ ಎಂದು ಸ್ನೇಹಿತರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕಾರ್ಮಿಕ ಬಿಸಿಲಿನ ತೀವ್ರತೆಗೆ ಬಳಲಿ ಮೃತಪಟ್ಟಿರಬಹುದು ಎಂದು ಆಸ್ಪತ್ರೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಇತ್ತ,ಗುಂಪಿನಲ್ಲಿದ್ದ ಸ್ನೇಹಿತರು ಸೋಮವಾರ ಮಧ್ಯಾಹ್ನದಿಂದ ಏನನ್ನೂ ತಿಂದಿರಲಿಲ್ಲ ಎಂದು ತಿಳಿಸಿದ್ದಾರೆ.</p>.<p>ಘಟನೆ ಕುರಿತು ಕಾರ್ಮಿಕನಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತದೇಹವನ್ನು ಮಲ್ಕಂಗಿರಿಗೆ ಕೊಂಡೊಯ್ಯಲು ವಾಹನ ವ್ಯವಸ್ಥೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>