ಗಣಿ ಪ್ರದೇಶ ಒಳಗೊಂಡಿರುವ ಜಿಲ್ಲೆಗಳು ಬರಪೀಡಿತವಾಗಿವೆ. ಅಲ್ಲಿನ ಶೇ 25ರಷ್ಟು ಜನ ಕೃಷಿಯಲ್ಲಿ ತೊಡಗಿದ್ದರೆ, ಶೇ 75ರಷ್ಟು ಜನ ಗಣಿಗಾರಿಕೆಗೆ ಸಂಬಂಧಿಸಿದ ವಿವಿಧ ವಲಯಗಳನ್ನು ಅವಲಂಬಿಸಿದ್ದಾರೆ. ಆದರೆ, ಗಣಿಗಾರಿಕೆ ಕ್ಷೇತ್ರದಲ್ಲಿನ ಅನಿಶ್ಚಿತತೆಯಿಂದಾಗಿ ಅನೇಕರು ನಿರುದ್ಯೋಗಿಗಳಾಗಿದ್ದಾರೆ ಎಂದು ವೇದಿಕೆಯ ವಕ್ತಾರ ಎಸ್.ರಾಜಕುಮಾರ್ ಅವರು ದೂರಿದರು.