<p><strong>ನವದೆಹಲಿ:</strong> ಆರು ವರ್ಷಗಳ ನಂತರ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದೇ 8 ರಿಂದ ಎರಡು ವಾರವಷ್ಟೇ ಅವರು ಬಳ್ಳಾರಿಯಲ್ಲಿರಬಹುದು.</p>.<p>ಬಹುಕೋಟಿ ಹಗರಣ ಆರೋಪ ಎದುರಿಸುತ್ತಿರುವರೆಡ್ಡಿಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದಾರೆ.</p>.<p>‘ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ನೋಡಲು ಅನುಮತಿ ನೀಡಬೇಕು’ ಎಂದುರೆಡ್ಡಿ ಅರ್ಜಿಯಲ್ಲಿ ಮನವಿ ಮಾಡಿದ್ದರು.</p>.<p>ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂಬ ಆದೇಶವಿದ್ದಾಗಲೂ ಆರೋಪಿಗಳ ವಿರುದ್ಧ ಆರು ವರ್ಷಗಳಲ್ಲಿ ಆರೋಪಪಟ್ಟಿ ದಾಖಲಿಸುವಲ್ಲಿ ಯಾಕೆ ವಿಳಂಬ ಮಾಡಲಾಗಿದೆ ಎಂದು ಇಂದಿರಾ ಬ್ಯಾನರ್ಜಿ ಮತ್ತು ಅಜಯ್ ರಸ್ತೋಗಿ ಅವರನ್ನು ಒಳಗೊಂಡ ರಜಾಕಾಲದ ಪೀಠ ಇದೇ ವೇಳೆ ಪ್ರಶ್ನಿಸಿದೆ.</p>.<p>2015ರ ಜನವರಿಯಲ್ಲಿ ರೆಡ್ಡಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್, ರಾಜ್ಯದ ಬಳ್ಳಾರಿ ಹಾಗೂ ಆಂಧ್ರಪ್ರದೇಶದಅನಂತಪುರ ಮತ್ತು ಕಡಪಾಗಳಿಗೆ ಭೇಟಿ ನೀಡುವುದಕ್ಕೆ ನಿಷೇಧ ವಿಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆರು ವರ್ಷಗಳ ನಂತರ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದೇ 8 ರಿಂದ ಎರಡು ವಾರವಷ್ಟೇ ಅವರು ಬಳ್ಳಾರಿಯಲ್ಲಿರಬಹುದು.</p>.<p>ಬಹುಕೋಟಿ ಹಗರಣ ಆರೋಪ ಎದುರಿಸುತ್ತಿರುವರೆಡ್ಡಿಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದಾರೆ.</p>.<p>‘ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ನೋಡಲು ಅನುಮತಿ ನೀಡಬೇಕು’ ಎಂದುರೆಡ್ಡಿ ಅರ್ಜಿಯಲ್ಲಿ ಮನವಿ ಮಾಡಿದ್ದರು.</p>.<p>ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂಬ ಆದೇಶವಿದ್ದಾಗಲೂ ಆರೋಪಿಗಳ ವಿರುದ್ಧ ಆರು ವರ್ಷಗಳಲ್ಲಿ ಆರೋಪಪಟ್ಟಿ ದಾಖಲಿಸುವಲ್ಲಿ ಯಾಕೆ ವಿಳಂಬ ಮಾಡಲಾಗಿದೆ ಎಂದು ಇಂದಿರಾ ಬ್ಯಾನರ್ಜಿ ಮತ್ತು ಅಜಯ್ ರಸ್ತೋಗಿ ಅವರನ್ನು ಒಳಗೊಂಡ ರಜಾಕಾಲದ ಪೀಠ ಇದೇ ವೇಳೆ ಪ್ರಶ್ನಿಸಿದೆ.</p>.<p>2015ರ ಜನವರಿಯಲ್ಲಿ ರೆಡ್ಡಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್, ರಾಜ್ಯದ ಬಳ್ಳಾರಿ ಹಾಗೂ ಆಂಧ್ರಪ್ರದೇಶದಅನಂತಪುರ ಮತ್ತು ಕಡಪಾಗಳಿಗೆ ಭೇಟಿ ನೀಡುವುದಕ್ಕೆ ನಿಷೇಧ ವಿಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>