<p><strong>ಪಟ್ನಾ:</strong>‘ರಾಹುಲ್ ಗಾಂಧಿ ಹುಚ್ಚ. ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಛೌಬೆ ಕಿಡಿಕಾರಿದ್ದಾರೆ.</p>.<p>ಇಲ್ಲಿನ ಸಸಾರಾಮ್ನಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಆಗಸವಿದ್ದಂತೆ. ಈ ರಾಹುಲ್ ಗಾಂಧಿ ತಿಪ್ಪೆಯಲ್ಲಿನ ಹುಳು. ರಾಹುಲ್ ತನ್ನನ್ನು ತಾನು ಬುದ್ಧಿವಂತ, ಮಹಾಚತುರ ಎಂದು ಕರೆದುಕೊಳ್ಳುತ್ತಾನೆ. ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾನೆ. ತಲೆಕೆಟ್ಟವರು ಮಾತ್ರ ಇಂತಹ ಮಾತುಗಳನ್ನು ಆಡಬಲ್ಲರು. ಹೀಗಾಗಿ ರಾಹುಲ್ ಗಾಂಧಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’ ಎಂದು ಛೌಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಗಳ ತಾಯಿ. ಮಹಾಘಟಬಂಧನವು ಭ್ರಷ್ಟಾಚಾರಿಗಳ ಬಂಧ’ ಎಂದೂ ಅವರು ಕಿಡಿಕಾರಿದ್ದಾರೆ.</p>.<p>ಛೌಬೆ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ. ‘ಸೋನಿಯಾ ಗಾಂಧಿ ಮಹಾಭಾರತದ ಪೂತನಿ’ ಎಂದು ಛೌಬೆ ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong>‘ರಾಹುಲ್ ಗಾಂಧಿ ಹುಚ್ಚ. ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಛೌಬೆ ಕಿಡಿಕಾರಿದ್ದಾರೆ.</p>.<p>ಇಲ್ಲಿನ ಸಸಾರಾಮ್ನಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಆಗಸವಿದ್ದಂತೆ. ಈ ರಾಹುಲ್ ಗಾಂಧಿ ತಿಪ್ಪೆಯಲ್ಲಿನ ಹುಳು. ರಾಹುಲ್ ತನ್ನನ್ನು ತಾನು ಬುದ್ಧಿವಂತ, ಮಹಾಚತುರ ಎಂದು ಕರೆದುಕೊಳ್ಳುತ್ತಾನೆ. ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾನೆ. ತಲೆಕೆಟ್ಟವರು ಮಾತ್ರ ಇಂತಹ ಮಾತುಗಳನ್ನು ಆಡಬಲ್ಲರು. ಹೀಗಾಗಿ ರಾಹುಲ್ ಗಾಂಧಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’ ಎಂದು ಛೌಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಗಳ ತಾಯಿ. ಮಹಾಘಟಬಂಧನವು ಭ್ರಷ್ಟಾಚಾರಿಗಳ ಬಂಧ’ ಎಂದೂ ಅವರು ಕಿಡಿಕಾರಿದ್ದಾರೆ.</p>.<p>ಛೌಬೆ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ. ‘ಸೋನಿಯಾ ಗಾಂಧಿ ಮಹಾಭಾರತದ ಪೂತನಿ’ ಎಂದು ಛೌಬೆ ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>