ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮಿ ಪರ ಮಧ್ಯಸ್ಥಿಕೆ ವಹಿಸಲು ಕೇಂದ್ರಸಚಿವರಿಗೆ ಕೋಟಿ ಲಂಚ: ಸಿಬಿಐಅಧಿಕಾರಿ ಆರೋಪ

Last Updated 19 ನವೆಂಬರ್ 2018, 13:16 IST
ಅಕ್ಷರ ಗಾತ್ರ

ನವದೆಹಲಿ:ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಅಸ್ತಾನಾ ಪ್ರಕರಣದ ವಿಚಾರಣೆ ನಡೆಸುತ್ತಿರುವಸಿಬಿಐ ಅಧಿಕಾರಿ ಮನೀಷ್‌ ಕುಮಾರ್‌ ಸಿನ್ಹಾ ಅವರು,‘ಪ್ರಕರಣವೊಂದರಲ್ಲಿಉದ್ಯಮಿಯಪರ ಮಧ್ಯಸ್ಥಿಕೆ ವಹಿಸಲು ಕೇಂದ್ರದ ಸಚಿವರೊಬ್ಬರು ಕೆಲವು ಕೋಟಿ ಲಂಚ ಪಡೆದಿದ್ದಾರೆ’ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಹೈದರಾಬಾದ್‌ ಮೂಲದ ಉದ್ಯಮಿ ಸತೀಶ್ ಸನಾ ಅವರಿಗೆ ಸಿಬಿಐನಿಂದ ಸಮನ್ಸ್‌ ನೀಡದೆ, ತನಿಖೆಯಿಂದ ಪಾರಾಗಲು ನೆರವು ನೀಡಿ ಲಂಚ ಪಡೆದಿರುವ ಆರೋಪರಾಕೇಶ್‌ ಅಸ್ತಾನಾ ಅವರ ಮೇಲಿದೆ. ಮನೀಷ್‌ ಕುಮಾರ್‌ ಈಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಕೇಂದ್ರದ ಸಚಿವರೊಬ್ಬರು ಲಂಚ ಪಡೆದಿರುವ ದಾಖಲೆಗಳು ತಮ್ಮ ಬಳಿ ಇವೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಸಿದ್ದಾರೆ.

‘ಕೇಂದ್ರ ಸಚಿವರು ಲಂಚ ಪಡೆದಿರುವ ದಾಖಲೆಗಳು ನನ್ನ ಬಳಿ ಇದ್ದು, ಅವು ಸುಪ್ರೀಂ ಕೋರ್ಟ್‌ಗೆ ಆಘಾತ ನೀಡಲಿವೆ. ಈ ಸಂಬಂಧಸದ್ಯ ಕಡ್ಡಾಯ ರಜೆಯಲ್ಲಿರುವ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಸಮ್ಮುಖದಲ್ಲಿ ನಾಳೆಯೇ(ನವೆಂಬರ್‌ 20ರಂದು) ವಿಚಾರಣೆ ನಡೆಸಬೇಕು’ ಎಂದು ಕೋರಿದ್ದಾರೆ. ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ, ‘ಯಾವುದೂ ನಮ್ಮನ್ನುಆಘಾತಗೊಳಿಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವಮಾಂಸ ರಫ್ತು ಉದ್ಯಮಿ ಮೊಯಿನ್‌ ಖುರೇಶಿ ಅವರೊಂದಿಗೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಉದ್ಯಮಿ ಸತೀಶ್ ಸನಾ ಮೇಲಿದೆ.

ಈ ಪ್ರಕರಣ ಮಾತ್ರವಲ್ಲದೆ ದೇಶದ ಗಮನ ಸೆಳೆದಿದ್ದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಪ್ರಕರಣವನ್ನೂಮನೀಷ್‌ ಕುಮಾರ್‌ ಅವರೇ ನಿರ್ವಹಿಸುತ್ತಿದ್ದಾರೆ. ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಿಂದ ಸಾವಿರಾರು ಕೋಟಿ ಸಾಲ ಪಡೆದು ಮರುಪಾವತಿಸದೆ ವಿದೇಶಕ್ಕೆ ಪಲಾಯನ ಮಾಡಿದ ಆರೋಪ ಉದ್ಯಮಿನೀರವ್‌ ಮೋದಿ ಅವರ ಮೇಲಿದೆ.

ಕಳೆದ ತಿಂಗಳು ಕೇಂದ್ರೀಯ ತನಿಖಾ ಸಂಸ್ಥೆಯಲ್ಲಿ (ನಿರ್ದೇಶಕ ಅಲೋಕ್‌ ವರ್ಮಾ ಹಾಗೂ ವಿಶೇಷ ನಿರ್ದೇಶಕ ರಾಕೇಶ್‌ ಅಸ್ತಾನಾ ಅವರ ನಡುವೆ) ಅಂತಃಕಲಹ ಉಂಟಾದ ಬಳಿಕ, ಅಕ್ಟೋಬರ್‌ 24ರಂದು ಮನೀಷ್‌ ಕುಮಾರ್‌ ಅವರನ್ನುನಾಗಪುರಕ್ಕೆ ವರ್ಗಾವಣೆ ಮಾಡಲಾಗಿದೆ. ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

‘ವರ್ಗಾವಣೆಯು ದುರುದ್ದೇಶದಿಂದ ಕೂಡಿದ್ದು, ಕೆಲವು ಪ್ರಭಾವಿ ಅಧಿಕಾರಿಗಳ ವಿರುದ್ಧದ ಸಾಕ್ಷ್ಯಗಳನ್ನು ಬಹಿರಂಗಪಡಿಸದಂತೆ ತಡೆಯಲು ನನ್ನನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಆರೋಪಿಸಿದ್ದರು.

ಅಸ್ತಾನಾ ಅವರು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರುಅಕ್ಟೋಬರ್‌15ರಂದು ಎಫ್‌ಐಆರ್‌ ದಾಖಲಿಸಿದ್ದರು. ಅದಾದ ಬಳಿಕ ಅಸ್ತಾನಾ ಮತ್ತು ಅಲೋಕ್‌ ನಡುವಿನ ಶೀತಲ ಸಮರ ಬಯಲಿಗೆ ಬಂದಿತ್ತು.

ಸಂಬಂಧಪಟ್ಟ ಲೇಖನಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT