ಕೊರೊನಾ ವಿರುದ್ಧ ದೇಶ ಒಗ್ಗೂಡಿರುವುದರ ಸಂಕೇತವಾಗಿ ಏಪ್ರಿಲ್ 5ರಂದು ರಾತ್ರಿ 9ರಿಂದ 9:09ರ ವರೆಗೆ ಜನರು ಸ್ವಯಂಪ್ರೇರಿತರಾಗಿ ವಿದ್ಯುತ್ ದೀಪಗಳನ್ನು ಆರಿಸಿ ದೀಪ, ಮೇಣದ ಬತ್ತಿ, ಟಾರ್ಚ್ ಅಥವಾ ಮೊಬೈಲ್ ಫ್ಲ್ಯಾಶ್ಲೈಟ್ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕರೆ ನೀಡಿದ್ದರು. ಇದಕ್ಕೆ ಪ್ರತಿಪಕ್ಷಗಳ ನಾಯಕರು ಸೇರಿದಂತೆ ಅನೇಕರಿಂದ ಟೀಕೆ ವ್ಯಕ್ತವಾಗಿತ್ತು.