‘ಭಾರತದಲ್ಲಿ ಚೀನಾದ ಹಲವು ಕಂಪನಿಗಳು ನಿರ್ಮಾಣ ಕಾರ್ಯ ನಡೆಸುತ್ತಿವೆ. ಇಂತಹ ಯೋಜನೆಗಳಿಂದ ಚೀನಾ ಕಂಪನಿಗಳನ್ನು ಹೊರಗಿಡಬೇಕು. ರಸ್ತೆ, ಜಲಸಾರಿಗೆ, ವಾಯುಯಾನ ಮತ್ತು ದೂರಸಂಪರ್ಕ ಕ್ಷೇತ್ರಗಳಲ್ಲಿ ಚೀನಾದ ಕಂಪನಿಗಳು ಮೇಲುಗೈ ಸಾಧಿಸಿವೆ. ಈ ಕ್ಷೇತ್ರಗಳಿಂದಲೂ ಚೀನಾದ ಕಂಪನಿಗಳನ್ನು ಹೊರಗಿಡಬೇಕು’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದರು.