ನವದೆಹಲಿ: ಇದೇ 30ರಂದು ತೆರವಾಗಲಿರುವ ರಾಜ್ಯ ವಿಧಾನ ಪರಿಷತ್ನ 7 ಸ್ಥಾನಗಳಿಗೆ 29ರಂದು ಚುನಾವಣೆ ನಿಗದಿಯಾಗಿದೆ.
ದ್ವೈವಾರ್ಷಿಕವಾಗಿ ನಡೆಯುವ ಚುನಾವಣೆ ಮೂಲಕ ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ನಜೀರ್ ಅಹಮ್ಮದ್, ಜಯಮ್ಮ, ಎಂ.ಸಿ. ವೇಣುಗೋಪಾಲ್, ಎನ್.ಎಸ್. ಬೋಸರಾಜು, ಎಚ್.ಎಂ. ರೇವಣ್ಣ, ಟಿ.ಎ. ಸರವಣ ಹಾಗೂ ಡಿ.ಯು. ಮಲ್ಲಿಕಾರ್ಜುನ ಅವರ ಪರಿಷತ್ ಸದಸ್ಯತ್ವದ ಅವಧಿ ಅಂತ್ಯವಾಗುತ್ತಿದೆ.
ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರ ಜೊತೆ ಚರ್ಚಿಸಿ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.
ಚುನಾವಣೆ ಪ್ರಕ್ರಿಯೆಯ ವಿವರ ಜೂನ್ 11: ಅಧಿಸೂಚನೆ ಪ್ರಕಟಣೆ ಜೂನ್ 18: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಜೂನ್ 19: ನಾಮಪತ್ರ ಪರಿಶೀಲನೆ ಜೂನ್ 22: ನಾಮಪತ್ರ ಹಿಂದೆ ಪಡೆಯಲು ಕೊನೆಯ ದಿನ ಜೂನ್ 29: ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ; ಸಂಜೆ 5ರಿಂದ ಮತಗಳ ಎಣಿಕೆ ಜೂನ್ 30: ಚುನಾವಣೆ ಪ್ರಕ್ರಿಯೆ ಮುಕ್ತಾಯ