ಮುಂಬಯಿ: ಮಹಿಳಾ ವೈದ್ಯಕೀಯ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ತಬ್ಲಿಗಿ ಜಮಾತ್ ಸದಸ್ಯರು ಯಾವುದೋ ಷಡ್ಯಂತ್ರದಲ್ಲಿ ಶಾಮೀಲಾಗಿದ್ದಾರೆ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂತಹ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಔಚಿತ್ಯವನ್ನೂ ಅವರು ಪ್ರಶ್ನಿಸಿದ್ದಾರೆ. ಜನರಲ್ಲಿ ನಂಬಿಕೆಯ ಭಾವನೆ ಮೂಡಿಸುವ ಸಲುವಾಗಿ ಅಂತಹವರನ್ನು ಥಳಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಬೇಕು ಎಂದೂ ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೊ ಸಂದೇಶದಲ್ಲಿ ದೀಪ ಅಥವಾ ಕ್ಯಾಂಡಲ್ ಉರಿಸುವುದರ ಬಗ್ಗೆ ಮಾತನಾಡುವ ಬದಲು ಪ್ರಸ್ತುತ ಸ್ಥಿತಿಗತಿಯ ಮತ್ತು ಕೊರೊನಾ ವಿರುದ್ಧದ ಹೋರಾಟ ಎತ್ತ ಸಾಗುತ್ತಿದೆ ಎಂಬ ಬಗ್ಗೆ ಮಾತನಾಡಿದ್ದರೆ ಜನರಿಗೆ ಸಮಾಧಾನವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.