‘ಶುಕ್ರವಾರ ರಾತ್ರಿ 9 ಗಂಟೆಯ ವೇಳೆಗೆ ಮಹೇಂದ್ರ ಅವರು, ಮೂರು ದನಗಳು, 2 ಕರು ಹಾಗೂ 12 ಎಮ್ಮೆಯ ಕರುಗಳ ಮೃತದೇಹಗಳನ್ನು ವಿಲೇವಾರಿಗಾಗಿ, ಘಟಕಕ್ಕೆ ಕೊಂಡೊಯ್ಯುತ್ತಿದ್ದರು. ಇದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳ ಒಪ್ಪಿಗೆಯನ್ನೂ ಪಡೆಯಲಾಗಿತ್ತು. ಆದರೆ ಗೌರ್ ನಗರದಲ್ಲಿ ವಾಹನವನ್ನು ಅಡ್ಡಗಟ್ಟಿದ ಕಿಡಿಗೇಡಿಗಳು, ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಅನುಮತಿ ಪಡೆದು ವಿಲೇವಾರಿ ಮಾಡುತ್ತಿದ್ದರೂ ಹಲ್ಲೆ ನಡೆಸಲಾಗಿದೆ. ಈ ಕುರಿತು ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.