‘ಗ್ರಾಮಗಳನ್ನೇ ಗುರಿಯಾಗಿಸಿಕೊಂಡು ಈ ಪಾದಯಾತ್ರೆ ನಡೆಯಬೇಕು. ಗ್ರಾಮೀಣ ಜನರೊಂದಿಗೆ ಸಂವಾದ ನಡೆಸಬೇಕು. ಗಾಂಧಿ ವಿಚಾರಧಾರೆಗಳ ಕುರಿತು ಅವರೊಂದಿಗೆ ಚರ್ಚಿಸಬೇಕು. ಸಸಿಗಳನ್ನು ನೆಡುವುದು, ಸ್ವಚ್ಛತಾ ಕಾರ್ಯ ಹಾಗೂ ಗ್ರಾಮಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಬೆಳಕು ಚೆಲ್ಲುವಂತೆ ಪ್ರಧಾನಿ ಸೂಚಿಸಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ತಿಳಿಸಿದರು.