ಯಾವುದೇ ಷರತ್ತುಗಳನ್ನು ವಿಧಿಸದೆ ನೀಡುವ ದೇಣಿಗೆ, ಅನುದಾನ, ನೆರವು, ಸ್ಥಿರಾಸ್ತಿಗಳನ್ನು ಒಳಗೊಂಡ ಕೊಡುಗೆಗಳನ್ನು ಟ್ರಸ್ಟ್ ಸ್ವೀಕರಿಸಲಿದೆ. ಹಿರಿಯ ವಕೀಲ ಕೆ.ಪರಾಶರನ್ ಅವರ ನಿವಾಸದಿಂದಲೇ ಟ್ರಸ್ಟ್ ಈಗ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಶಾಶ್ವತ ಕಚೇರಿಯನ್ನು ಹೊಂದಲಿದೆ ಎಂದು ಅವರು ಹೇಳಿದ್ದಾರೆ.