ನವದೆಹಲಿ/ಪುಣೆ: ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆಯು (ಸಿಆರ್ಪಿಸಿ) ಭಾರತದ ಈಗಿನ ಸ್ಥಿತಿಗೆ ಹೊಂದಿಕೊಳ್ಳುವ ರೀತಿಯಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅತ್ಯಾಚಾರದಂತಹ ಹೀನ ಕೃತ್ಯಗಳಲ್ಲಿ ಅಪರಾಧ ನ್ಯಾಯದಾನವು ವಿಳಂಬವಾಗುತ್ತಿದೆ ಎಂಬುದರ ಚರ್ಚೆಯ ಸಂದರ್ಭದಲ್ಲಿ ಶಾ ಅವರ ಹೇಳಿಕೆಯು ಮಹತ್ವ ಪಡೆದಿದೆ.