ಇದೀಗ ಅಂತರ ರಾಷ್ಟ್ರೀಯ ಹಿಂದೂ ಪರಿಷತ್ ಮುಖ್ಯಸ್ಥರಾಗಿರುವ ತೊಗಾಡಿಯಾ, ಬಿಜೆಪಿ ಮತ್ತು ಆರ್ಎಸ್ಎಸ್ಗೆ ರಾಮ ಮಂದಿರ ನಿರ್ಮಿಸುವ ಯಾವ ಉದ್ದೇಶವೂ ಇದ್ದಂತಿಲ್ಲ ಎಂದಿದ್ದಾರೆ.
ಮೋದಿಯವರ ಹೇಳಿಕೆ ನಂತರ ಆರ್ಎಸ್ಎಸ್ ಮುಖ್ಯಸ್ಥಿ ಭಯ್ಯಾಜೀ ಜೋಷಿ ಅವರು ಕೂಡಾ ಮುಂದಿನ ಐದು ವರ್ಷಗಳಲ್ಲಿ ರಾಮ ಮಂದಿರ ನಿರ್ಮಿಸುವುದಿಲ್ಲ ಎಂದು ಹೇಳಿದ್ದಾರೆ, ಬಿಜೆಪಿ ಮತ್ತು ಆರ್ಎಸ್ಎಸ್ 125 ಕೋಟಿ ಭಾರತೀಯರನ್ನು ಕತ್ತಲಲ್ಲಿ ಇರಿಸಿದೆ. ಆದರೆ ದೇಶದ ಹಿಂದೂಗಳು ಈಗ ಎಚ್ಚೆತ್ತಿದ್ದಾರೆ.
ತ್ರಿವಳಿ ತಲಾಖ್ ಬಗ್ಗೆ ಕಾನೂನು ತರಲು ಮೋದಿ ಹಗಲು ರಾತ್ರಿ ಪ್ರಯತ್ನಿಸಿದ್ದರು, ಆದರೆ ರಾಮ ಮಂದಿರದ ವಿಷಯದಲ್ಲಿ ಇಂಥ ಯಾವುದೇ ಪ್ರಯತ್ನಗಳು ಕಾಣುತ್ತಿಲ್ಲ.