ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಆರೋಪಿಸಿದರು.
ದೇಶವ್ಯಾಪಿ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯೇ ಇದಕ್ಕೆ ಸಾಕ್ಷಿ ಎಂದು ಅವರು ಹೇಳಿದರು.
ಅಂತರರಾಷ್ಟ್ರೀಯ ಹಣಕಾಸು ನಿಧಿಯು (ಐಎಂಎಫ್) ಪ್ರಸಕ್ತ ಹಣಕಾಸು ವರ್ಷದಲ್ಲಿ (2019–20) ಭಾರತದ ಆರ್ಥಿಕ ವೃದ್ಧಿ ದರ (ಜಿಡಿಪಿ) ಶೇ 4.8ರಷ್ಟಕ್ಕೆ ತಗ್ಗಿದೆ ಎಂದು ಹೇಳಿದ ಬೆನ್ನಲ್ಲೇ, ‘ಇದು ದೇಶದ ಆರ್ಥಿಕತೆಯ ಶೋಚನೀಯ ಸ್ಥಿತಿ’ ಎಂದು ಸಿಬಲ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.