ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರಿ ಪರ್‌ ಚರ್ಚಾ ನಡೆಸಿ: ಸೀತಾರಾಂ ಯೆಚೂರಿ

Last Updated 21 ಜನವರಿ 2020, 20:45 IST
ಅಕ್ಷರ ಗಾತ್ರ

ನವದೆಹಲಿ: ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪ್ರಧಾನಿ ನರೇಂದ್ರ ಮೋದಿ ಅವರು ‘ನೌಕರಿ ಪರ್‌ ಚರ್ಚಾ’ ನಡೆಸಬೇಕು ಎಂದು ವ್ಯಂಗ್ಯವಾಡಿದ್ದಾರೆ.

‘ನೋಟು ರದ್ದು ಮತ್ತು ಜಿಎಸ್‌ಟಿಯಂತಹ ಕೆಟ್ಟ ಯೋಜನೆಗಳ ಮೂಲಕ ನಿರುದ್ಯೋಗ ಸಮಸ್ಯೆಗೆ ಕಾರಣವಾಗಿರುವ ಮೋದಿ, ‘ನೌಕರಿ ಪರ್‌ ಚರ್ಚಾ’ ನಡೆಸುವ ಮೂಲಕ ಲಕ್ಷಾಂತರ ನಿರುದ್ಯೋಗಿಗಳ ‘ಮನ್‌ ಕಿ ಬಾತ್‌’ ಆಲಿಸಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

‘ಸ್ವಾತಂತ್ರ್ಯ ನಂತರದ ದೇಶದಲ್ಲಿ ಮೊದಲ ಬಾರಿ ನಿರುದ್ಯೋಗ ಪ್ರಮಾಣ ಅತಿ ಹೆಚ್ಚಾಗಿದೆ. 15ರಿಂದ 19 ವಯೋಮಾನದ ಶೇ 45 ಮಂದಿ, 20ರಿಂದ 24 ವಯೋಮಾನದ ಶೇ 37 ಮಂದಿ ನಿರುದ್ಯೋಗಿಗಳಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT