‘ಮೋದಿ ಅವರೇ, ನಿಮಗೆ 370ನೇ ವಿಧಿ ಮಾತ್ರ ನೆನಪಿನಲ್ಲಿ ಇರುತ್ತದೆ. ಆದರೆ ಸಂವಿಧಾನಬದ್ಧ ಕರ್ತವ್ಯಗಳು ನೆನಪಿನಲ್ಲಿ ಇರುವುದಿಲ್ಲ. ದೇಶದ ಶೇ 93ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜನರು ಹೇಗೆ ಬಳಲುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲ.ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಗುಜರಾತ್ಗಳಲ್ಲಿ ಮಾನವ ಅಭಿವೃದ್ಧಿಯ ಸೂಚ್ಯಂಕ ಎಷ್ಟಿದೆ ಎಂಬುದು ನಿಮಗೆ ಗೊತ್ತಿದೆಯೇ? ದೇಶದಲ್ಲಿ ನಿರುದ್ಯೋಗ ಯಾವ ಮಟ್ಟದಲ್ಲಿದೆ ಎಂಬುದು ಗೊತ್ತಿದೆಯೇ’ ಎಂದು ಅವರು ಪ್ರಶ್ನಿಸಿದರು.