ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರ ರದ್ದತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ವಿಶೇಷಾಧಿಕಾರವು ಪ್ರತ್ಯೇಕತಾವಾದ, ಭ್ರಷ್ಟಾಚಾರ ಮತ್ತು ವಂಶಾಡಳಿತಕ್ಕೆ ನೆರವಾಗಿತ್ತು, ಭಯೋತ್ಪಾದನೆ ಹರಡಲು ಪಾಕಿಸ್ತಾನದ ಕೈಯಲ್ಲಿನ ಉಪಕರಣವಾಗಿತ್ತು. ಇವಿಷ್ಟು ಬಿಟ್ಟರೆ, ವಿಶೇಷಾಧಿಕಾರದಿಂದ ಯಾವ ಪ್ರಯೋಜನವೂ ಆಗಿಲ್ಲ ಎಂದು ಹೇಳಿದ್ದಾರೆ.