<p class="title"><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರ ರದ್ದತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ವಿಶೇಷಾಧಿಕಾರವು ಪ್ರತ್ಯೇಕತಾವಾದ, ಭ್ರಷ್ಟಾಚಾರ ಮತ್ತು ವಂಶಾಡಳಿತಕ್ಕೆ ನೆರವಾಗಿತ್ತು, ಭಯೋತ್ಪಾದನೆ ಹರಡಲು ಪಾಕಿಸ್ತಾನದ ಕೈಯಲ್ಲಿನ ಉಪಕರಣವಾಗಿತ್ತು. ಇವಿಷ್ಟು ಬಿಟ್ಟರೆ, ವಿಶೇಷಾಧಿಕಾರದಿಂದ ಯಾವ ಪ್ರಯೋಜನವೂ ಆಗಿಲ್ಲ ಎಂದು ಹೇಳಿದ್ದಾರೆ.</p>.<p class="title">ಸುದ್ದಿವಾಹಿನಿ ಮೂಲಕ ದೇಶವನ್ನು ಉದ್ದೇಶಿಸಿ ಮೋದಿ ಗುರುವಾರ ಮಾತನಾಡಿದರು. ವಿಶೇಷಾಧಿಕಾರ ರದ್ದತಿಯು ಐತಿಹಾಸಿಕ ತೀರ್ಮಾನ ಎಂದ ಅವರು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ನಲ್ಲಿ ಹೊಸ ಯುಗ ಆರಂಭವಾಗಿದೆ ಎಂದರು.</p>.<p class="title">ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಸರ್ದಾರ್ ಪಟೇಲ್ ಮತ್ತು ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ ಎಂದು ಹೇಳಿದರು.</p>.<p>ಇಡೀ ದೇಶಕ್ಕಾಗಿ ಮಾಡಿದ ಕಾನೂನುಗಳ ಪ್ರಯೋಜನಗಳು 370ನೇ ವಿಧಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ 1.5 ಕೋಟಿ ಜನರಿಗೆ ಅನ್ವಯವೇ ಆಗುತ್ತಿರಲಿಲ್ಲ. ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರವು ಹೆಚ್ಚು ಹೆಚ್ಚು ಅಭಿವೃದ್ಧಿ ಹೊಂದಲಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ಹಿಡಿತದಿಂದ ಈ ಪ್ರದೇಶವನ್ನು ಬಿಡಿಸುತ್ತೇವೆ ಎಂದು ಹೇಳಿದರು.</p>.<p>***</p>.<p>ಜಮ್ಮು ಮತ್ತು ಕಾಶ್ಮೀರವು ದೀರ್ಘ ಕಾಲ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯದು. ಆದರೆ, ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವಾಗಿಯೇ ಉಳಿಸಿಕೊಳ್ಳಲಾಗುವುದು</p>.<p><strong>ನರೇಂದ್ರ ಮೋದಿ, ಪ್ರಧಾನಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರ ರದ್ದತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ವಿಶೇಷಾಧಿಕಾರವು ಪ್ರತ್ಯೇಕತಾವಾದ, ಭ್ರಷ್ಟಾಚಾರ ಮತ್ತು ವಂಶಾಡಳಿತಕ್ಕೆ ನೆರವಾಗಿತ್ತು, ಭಯೋತ್ಪಾದನೆ ಹರಡಲು ಪಾಕಿಸ್ತಾನದ ಕೈಯಲ್ಲಿನ ಉಪಕರಣವಾಗಿತ್ತು. ಇವಿಷ್ಟು ಬಿಟ್ಟರೆ, ವಿಶೇಷಾಧಿಕಾರದಿಂದ ಯಾವ ಪ್ರಯೋಜನವೂ ಆಗಿಲ್ಲ ಎಂದು ಹೇಳಿದ್ದಾರೆ.</p>.<p class="title">ಸುದ್ದಿವಾಹಿನಿ ಮೂಲಕ ದೇಶವನ್ನು ಉದ್ದೇಶಿಸಿ ಮೋದಿ ಗುರುವಾರ ಮಾತನಾಡಿದರು. ವಿಶೇಷಾಧಿಕಾರ ರದ್ದತಿಯು ಐತಿಹಾಸಿಕ ತೀರ್ಮಾನ ಎಂದ ಅವರು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ನಲ್ಲಿ ಹೊಸ ಯುಗ ಆರಂಭವಾಗಿದೆ ಎಂದರು.</p>.<p class="title">ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಸರ್ದಾರ್ ಪಟೇಲ್ ಮತ್ತು ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ ಎಂದು ಹೇಳಿದರು.</p>.<p>ಇಡೀ ದೇಶಕ್ಕಾಗಿ ಮಾಡಿದ ಕಾನೂನುಗಳ ಪ್ರಯೋಜನಗಳು 370ನೇ ವಿಧಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ 1.5 ಕೋಟಿ ಜನರಿಗೆ ಅನ್ವಯವೇ ಆಗುತ್ತಿರಲಿಲ್ಲ. ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರವು ಹೆಚ್ಚು ಹೆಚ್ಚು ಅಭಿವೃದ್ಧಿ ಹೊಂದಲಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ಹಿಡಿತದಿಂದ ಈ ಪ್ರದೇಶವನ್ನು ಬಿಡಿಸುತ್ತೇವೆ ಎಂದು ಹೇಳಿದರು.</p>.<p>***</p>.<p>ಜಮ್ಮು ಮತ್ತು ಕಾಶ್ಮೀರವು ದೀರ್ಘ ಕಾಲ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯದು. ಆದರೆ, ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವಾಗಿಯೇ ಉಳಿಸಿಕೊಳ್ಳಲಾಗುವುದು</p>.<p><strong>ನರೇಂದ್ರ ಮೋದಿ, ಪ್ರಧಾನಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>