ಕಾಶ್ಮೀರ ವಿಚಾರ ಚರ್ಚೆ ಇಲ್ಲ:ಕಾಶ್ಮೀರ ವಿಚಾರದ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿಲ್ಲ. ಕಾಶ್ಮೀರವು ನಮ್ಮ ಆಂತರಿಕ ವಿಚಾರ ಎಂಬ ನಿಲುವಿಗೆ ಬದ್ಧರಾಗಿದ್ದೇವೆ ಎಂದು ವಿದೇಶಾಂಗ ಕಾರ್ಯದರ್ಶಿವಿಜಯ್ ಗೋಖಲೆ ತಿಳಿಸಿದ್ದಾರೆ. ವಾಣಿಜ್ಯ, ರಕ್ಷಣಾ ಸಹಕಾರ, ಭಯೋತ್ಪಾದನೆ ನಿರ್ಮೂಲನೆ ವಿಚಾರವಾಗಿ ಷಿ–ಮೋದಿ ಮಾತುಕತೆ ನಡೆಸಿದ್ದಾರೆ. ಹವಾಮಾನ ಬದಲಾವಣೆ ಕುರಿತೂ ಮಾತುಕತೆ ನಡೆದಿದೆ. ಷಿ ಅವರು ಮಾತುಕತೆ ವೇಳೆ ರಕ್ಷಣಾ ಸಹಕಾರ ವಿಚಾರಕ್ಕೆ ಸಂಬಂಧಿಸಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಗೋಖಲೆ ಹೇಳಿದ್ದಾರೆ.