ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ತಡೆ ಕೋರಿ ರಾಬರ್ಟ್ ವಾದ್ರಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ಮಂಗಳವಾರ ಇ.ಡಿ ಎದುರುವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇದೇ ವೇಳೆವಾದ್ರಾ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿವಶಪಡಿಸಿಕೊಂಡಿದ್ದ ದಾಖಲೆಗಳಪ್ರತಿಗಳನ್ನು ಐದು ದಿನಗಳೊಳಗೆ ವಾದ್ರಾಗೆ ಒದಗಿಸುವಂತೆವಿಶೇಷ ಸಿಬಿಐ ನ್ಯಾಯಾಧೀಶ ಅರವಿಂದ್ ಕುಮಾರ್ ನಿರ್ದೇಶಿಸಿದ್ದಾರೆ.