<p><strong>ಭೋಪಾಲ್:</strong> ಕೊರೊನಾ ಸೋಂಕು ವ್ಯಾಪಿಸುತ್ತಿರುವುದನ್ನು ನಿಯಂತ್ರಿಸಲುಮಧ್ಯಪ್ರದೇಶ ಸರ್ಕಾರವು ಜುಲೈ 1ರಂದು ‘ಕಿಲ್ ಕೊರೊನಾ’ ಅಭಿಯಾನಕ್ಕೆ ಚಾಲನೆ ನೀಡಲಿದೆ.</p>.<p>ಈ ಅಭಿಯಾನದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತದೆ. ಈ ವೇಳೆ ಆರೋಗ್ಯ ತಪಾಸಣೆಯೂ ನಡೆಯಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರುಶನಿವಾರ ನಡೆಸಿದ ಆನ್ಲೈನ್ ಸಭೆಯಲ್ಲಿ ತಿಳಿಸಿದ್ದಾರೆ.</p>.<p>15 ದಿನಗಳ ಈ ಅಭಿಯಾನದಲ್ಲಿ 2.5 ಲಕ್ಷ ಪರೀಕ್ಷೆಗಳು ನಡೆಸಲು ಉದ್ದೇಶಿಸಲಾಗಿದೆ, ನಿತ್ಯ 15 ಸಾವಿರದಿಂದ 20 ಸಾವಿರ ಜನರಿಂದ ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>‘ಪ್ರಸ್ತುತ ರಾಜ್ಯದಲ್ಲಿ 10 ಲಕ್ಷ ಜನರಲ್ಲಿ 4 ಸಾವಿರ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಈ ಪರೀಕ್ಷಾ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p>ಮಧ್ಯ ಪ್ರದೇಶದಲ್ಲಿ ಕೋವಿಡ್ನಿಂದ ಗುಣಮುಖ ಆಗುತ್ತಿರುವವರ ಪ್ರಮಾಣ ಶೇ 76.9 ರಷ್ಟಿದೆ. ಇಲ್ಲಿ ಕೋವಿಡ್ಬೆಳವಣಿಗೆಯ ದರ ಶೇ 1.44 ರಷ್ಟಿದೆ. ರಾಷ್ಟ್ರಮಟ್ಟದಲ್ಲಿ ಕೋವಿಡ್ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 58.1ರಷ್ಟಿದ್ದರೆ, ಕೋವಿಡ್ ಬೆಳವಣಿಗೆಯ ದರ ಶೇ 3.69ರಷ್ಟಿದೆ ಎಂದು ಚೌಹಾಣ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕೊರೊನಾ ಸೋಂಕು ವ್ಯಾಪಿಸುತ್ತಿರುವುದನ್ನು ನಿಯಂತ್ರಿಸಲುಮಧ್ಯಪ್ರದೇಶ ಸರ್ಕಾರವು ಜುಲೈ 1ರಂದು ‘ಕಿಲ್ ಕೊರೊನಾ’ ಅಭಿಯಾನಕ್ಕೆ ಚಾಲನೆ ನೀಡಲಿದೆ.</p>.<p>ಈ ಅಭಿಯಾನದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತದೆ. ಈ ವೇಳೆ ಆರೋಗ್ಯ ತಪಾಸಣೆಯೂ ನಡೆಯಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರುಶನಿವಾರ ನಡೆಸಿದ ಆನ್ಲೈನ್ ಸಭೆಯಲ್ಲಿ ತಿಳಿಸಿದ್ದಾರೆ.</p>.<p>15 ದಿನಗಳ ಈ ಅಭಿಯಾನದಲ್ಲಿ 2.5 ಲಕ್ಷ ಪರೀಕ್ಷೆಗಳು ನಡೆಸಲು ಉದ್ದೇಶಿಸಲಾಗಿದೆ, ನಿತ್ಯ 15 ಸಾವಿರದಿಂದ 20 ಸಾವಿರ ಜನರಿಂದ ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>‘ಪ್ರಸ್ತುತ ರಾಜ್ಯದಲ್ಲಿ 10 ಲಕ್ಷ ಜನರಲ್ಲಿ 4 ಸಾವಿರ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಈ ಪರೀಕ್ಷಾ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p>ಮಧ್ಯ ಪ್ರದೇಶದಲ್ಲಿ ಕೋವಿಡ್ನಿಂದ ಗುಣಮುಖ ಆಗುತ್ತಿರುವವರ ಪ್ರಮಾಣ ಶೇ 76.9 ರಷ್ಟಿದೆ. ಇಲ್ಲಿ ಕೋವಿಡ್ಬೆಳವಣಿಗೆಯ ದರ ಶೇ 1.44 ರಷ್ಟಿದೆ. ರಾಷ್ಟ್ರಮಟ್ಟದಲ್ಲಿ ಕೋವಿಡ್ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 58.1ರಷ್ಟಿದ್ದರೆ, ಕೋವಿಡ್ ಬೆಳವಣಿಗೆಯ ದರ ಶೇ 3.69ರಷ್ಟಿದೆ ಎಂದು ಚೌಹಾಣ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>