ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನುಅವಧಿಗೂ ಮುನ್ನವೇ ವಿಸರ್ಜಿಸಿದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆದೇಶದ ವಿರುದ್ಧ ಕೋರ್ಟ್ ಬದಲು ಜನತಾ ನ್ಯಾಯಾಲಯದ ಮೊರೆ ಹೋಗಲು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನಿರ್ಧರಿಸಿದ್ದಾರೆ.
ಶಾಸಕರ ಖರೀದಿ ಮತ್ತು ಭಿನ್ನ ರಾಜಕೀಯ ಸಿದ್ಧಾಂತ ಹೊಂದಿರುವ ರಾಜಕೀಯ ಪಕ್ಷಗಳಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ರಾಜ್ಯಪಾಲರು ನೀಡಿದ ಕಾರಣವನ್ನು ಟ್ವೀಟ್ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.