<p><strong>ನವದೆಹಲಿ:</strong> ಹೊಸ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಕ್ನಲ್ಲಿರಿಲಾಯನ್ಸ್ ಗ್ರೂಪ್ ವಿಶೇಷ ಕಾರ್ಯ ಪಡೆ ರಚಿಸಲಿದ್ದು, ಇಲ್ಲಿ ಹೂಡಿಕೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.</p>.<p>ರಿಲಾಯನ್ಸ್ ಇಂಡಸ್ಟ್ರೀಸ್ನ 42ನ ವಾರ್ಷಿಕ ಮಹಾ ಸಭೆಯಲ್ಲಿ ಅಂಬಾನಿ ಈ ಮಾತುಗಳನ್ನು ಹೇಳಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ಜನರ ಅಭಿವೃದ್ದಿಗಾಗಿ ನಾವು ಬದ್ಧರಾಗಿದ್ದೇವೆ.ರಿಲಾಯನ್ಸ್ ವಿಶೇಷ ಕಾರ್ಯ ಪಡೆ ರಚಿಸಲಿದೆ.ಜಮ್ಮು ಮತ್ತು ಕಾಶ್ಮೀರ, ಲಡಾಕ್ನಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಂಬರುವ ತಿಂಗಳುಗಳಲ್ಲಿ ಹಲವಾರು ಪ್ರಕಟಣೆಗಳನ್ನು ನೀವು ನಮ್ಮಿಂದ ನಿರೀಕ್ಷಿಸಬಹುದು ಎಂದಿದ್ದಾರೆ ಮುಕೇಶ್.</p>.<p>ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯು ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ ಆಗುವುದಿಲ್ಲ ಎಂಬ ಅಧಿಸೂಚನೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೊರಡಿಸಿದ್ದು, ಈ ರಾಜ್ಯವು ಈವರೆಗೆ ಅನುಭವಿಸಿಕೊಂಡು ಬಂದಿದ್ದ ವಿಶೇಷ ಅಧಿಕಾರ ಮತ್ತು ಸೌಲಭ್ಯಗಳು ಈ ಮೂಲಕ ರದ್ದಾಗಿವೆ,ಅಷ್ಟೇ ಅಲ್ಲದೆ ಈ ರಾಜ್ಯವು ತನ್ನದೇ ಆದ ಪ್ರತ್ಯೇಕ ಧ್ವಜ ಮತ್ತು ಸಂವಿಧಾನವನ್ನು ಹೊಂದಿತ್ತು.ವಿಶೇಷಾಧಿಕಾರ ರದ್ದಾಗುವುದರ ಜತೆಗೆ ಇವೆಲ್ಲವೂ ರದ್ದಾಗಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಕ್ನ್ನುಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.ಅಕ್ಟೋಬರ್ 31ರಿಂದ ಇವು ಕೇಂದ್ರಾಡಳಿತ ಪ್ರದೇಶವಾಗಿ ಬದಲಾಗಲಿವೆ.</p>.<p><span style="color:#800000;"><strong>ಇದನ್ನೂ ಓದಿ:</strong></span><strong><a href="https://www.prajavani.net/stories/national/jammu-and-kashmir-656148.html" target="_blank">ಕಾಶ್ಮೀರ: ಇನ್ನಿಲ್ಲ ವಿಶೇಷಾಧಿಕಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೊಸ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಕ್ನಲ್ಲಿರಿಲಾಯನ್ಸ್ ಗ್ರೂಪ್ ವಿಶೇಷ ಕಾರ್ಯ ಪಡೆ ರಚಿಸಲಿದ್ದು, ಇಲ್ಲಿ ಹೂಡಿಕೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.</p>.<p>ರಿಲಾಯನ್ಸ್ ಇಂಡಸ್ಟ್ರೀಸ್ನ 42ನ ವಾರ್ಷಿಕ ಮಹಾ ಸಭೆಯಲ್ಲಿ ಅಂಬಾನಿ ಈ ಮಾತುಗಳನ್ನು ಹೇಳಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ಜನರ ಅಭಿವೃದ್ದಿಗಾಗಿ ನಾವು ಬದ್ಧರಾಗಿದ್ದೇವೆ.ರಿಲಾಯನ್ಸ್ ವಿಶೇಷ ಕಾರ್ಯ ಪಡೆ ರಚಿಸಲಿದೆ.ಜಮ್ಮು ಮತ್ತು ಕಾಶ್ಮೀರ, ಲಡಾಕ್ನಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಂಬರುವ ತಿಂಗಳುಗಳಲ್ಲಿ ಹಲವಾರು ಪ್ರಕಟಣೆಗಳನ್ನು ನೀವು ನಮ್ಮಿಂದ ನಿರೀಕ್ಷಿಸಬಹುದು ಎಂದಿದ್ದಾರೆ ಮುಕೇಶ್.</p>.<p>ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯು ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ ಆಗುವುದಿಲ್ಲ ಎಂಬ ಅಧಿಸೂಚನೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೊರಡಿಸಿದ್ದು, ಈ ರಾಜ್ಯವು ಈವರೆಗೆ ಅನುಭವಿಸಿಕೊಂಡು ಬಂದಿದ್ದ ವಿಶೇಷ ಅಧಿಕಾರ ಮತ್ತು ಸೌಲಭ್ಯಗಳು ಈ ಮೂಲಕ ರದ್ದಾಗಿವೆ,ಅಷ್ಟೇ ಅಲ್ಲದೆ ಈ ರಾಜ್ಯವು ತನ್ನದೇ ಆದ ಪ್ರತ್ಯೇಕ ಧ್ವಜ ಮತ್ತು ಸಂವಿಧಾನವನ್ನು ಹೊಂದಿತ್ತು.ವಿಶೇಷಾಧಿಕಾರ ರದ್ದಾಗುವುದರ ಜತೆಗೆ ಇವೆಲ್ಲವೂ ರದ್ದಾಗಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಕ್ನ್ನುಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.ಅಕ್ಟೋಬರ್ 31ರಿಂದ ಇವು ಕೇಂದ್ರಾಡಳಿತ ಪ್ರದೇಶವಾಗಿ ಬದಲಾಗಲಿವೆ.</p>.<p><span style="color:#800000;"><strong>ಇದನ್ನೂ ಓದಿ:</strong></span><strong><a href="https://www.prajavani.net/stories/national/jammu-and-kashmir-656148.html" target="_blank">ಕಾಶ್ಮೀರ: ಇನ್ನಿಲ್ಲ ವಿಶೇಷಾಧಿಕಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>