ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯು ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ ಆಗುವುದಿಲ್ಲ ಎಂಬ ಅಧಿಸೂಚನೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೊರಡಿಸಿದ್ದು, ಈ ರಾಜ್ಯವು ಈವರೆಗೆ ಅನುಭವಿಸಿಕೊಂಡು ಬಂದಿದ್ದ ವಿಶೇಷ ಅಧಿಕಾರ ಮತ್ತು ಸೌಲಭ್ಯಗಳು ಈ ಮೂಲಕ ರದ್ದಾಗಿವೆ,ಅಷ್ಟೇ ಅಲ್ಲದೆ ಈ ರಾಜ್ಯವು ತನ್ನದೇ ಆದ ಪ್ರತ್ಯೇಕ ಧ್ವಜ ಮತ್ತು ಸಂವಿಧಾನವನ್ನು ಹೊಂದಿತ್ತು.ವಿಶೇಷಾಧಿಕಾರ ರದ್ದಾಗುವುದರ ಜತೆಗೆ ಇವೆಲ್ಲವೂ ರದ್ದಾಗಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಕ್ನ್ನುಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.ಅಕ್ಟೋಬರ್ 31ರಿಂದ ಇವು ಕೇಂದ್ರಾಡಳಿತ ಪ್ರದೇಶವಾಗಿ ಬದಲಾಗಲಿವೆ.