ಕಾಸರಗೋಡಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾನುವಾರ ರಾತ್ರಿ ಪಾಲ್ಗೊಂಡು ಮನೆಗೆ ತೆರಳುತ್ತಿದ್ದ ಶರತ್ ಲಾಲ್ ಮತ್ತು ಕ್ರಿಪೇಶ್ ಎಂಬುವವರನ್ನು ಅಪಚಿತ ಗುಂಪೊಂದು ಅಡ್ಡಗಟ್ಟಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರಾಜ್ಯ ದಾದ್ಯಂತ ಹರತಾಳಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೂಲಕ ಕರೆ ನೀಡಿತು. ಈ ಜೋಡಿ ಕೊಲೆಯಲ್ಲಿ ಆಡಳಿತ ಪಕ್ಷ ಸಿಪಿಎಂ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.