ಇಲ್ಲಿಯವರೆಗೂನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಶನಿವಾರ ಹತ್ಯೆ ನಡೆದ ಸ್ಥಳಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ತ್ರಿವಳಿ ಹತ್ಯೆ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಿರುವು ಪಡೆದಿದ್ದು,‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ಆಗ್ರಹಿಸಿದೆ. ಹತ್ಯೆಯಾದ ಶಿಕ್ಷಕ ಬಂಧು ಪ್ರಕಾಶ್ ಪಾಲ್ ಆರ್ಎಸ್ಎಸ್ ಬೆಂಬಲಿಗರಾಗಿದ್ದರು ಎಂದು ಆರ್ಎಸ್ಎಸ್ ಹೇಳಿಕೊಂಡಿದೆ.