ಬುಧವಾರ ಬಿಹಾರದ ಪೂರ್ಣಿಯಾದಲ್ಲಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಕಿಡಿಕಾರಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ 2015ಕ್ಕಿಂತ ಮುಂಚೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಮುಸ್ಲಿಮೇತರ ಶರಣಾರ್ಥಿಗಳಿಗೆ ಪೌರತ್ವ ನೀಡಲಾಗುತ್ತದೆ. ನಮ್ಮ ನೆರೆ ರಾಷ್ಟ್ರಗಳಲ್ಲಿ ಧಾರ್ಮಿಕ ದೌರ್ಜನ್ಯಗೊಳಗಾದವರಿಗೆ ಸಹಾಯ ಮಾಡಲು ಈ ಕಾನೂನು ಅಗತ್ಯವಾಗಿದೆ ಎಂದಿದ್ದಾರೆ ಸಚಿವರು.