ನವದೆಹಲಿ: ಕೊರೊನಾ ಸೋಂಕು ತಡೆಯಲು ದೇಶವ್ಯಾಪಿ ಲಾಕ್ಡೌನ್ ಮಾಡಿರುವಾಗ ಈ ನಿಯಮವನ್ನು ಉಲ್ಲಂಘಿಸಿದವರನ್ನು ಅಥವಾ ಅಧಿಕಾರಿಗಳ ಕರ್ತವ್ಯಕ್ಕೆ ತಡೆಯೊಡ್ಡುವವರನ್ನು ಜೈಲಿಗೆ ಹಾಕಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳಿಗೆ ಹೇಳಿದೆ.ಲಾಕ್ಡೌನ್ ವೇಳೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಜನರು ಹಲ್ಲೆ ನಡೆಸಿರುವ ಘಟನೆ ವರದಿಯಾಗುತ್ತಿದ್ದು ಈ ರೀತಿ ತೊಂದರೆಯೊಡ್ಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಹೇಳಿದೆ.