<p><strong>ನವದೆಹಲಿ:</strong> ಬಿಹಾರದ ಮುಜಫ್ಫರ್ಪುರ ಬಾಲಿಕಾ ಗೃಹದಲ್ಲಿ ನಡೆದಿದೆ ಎನ್ನಲಾದ 11 ಬಾಲಕಿಯರ ಹತ್ಯೆಗೆ ಸಂಬಂಧಿಸಿದ ತನಿಖಾ ವರದಿಯ ವಸ್ತುಸ್ಥಿತಿ ವರದಿಯನ್ನು ಜೂನ್ 3ರೊಳಗೆ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.</p>.<p>ಪ್ರಕರಣದ ತುರ್ತು ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೂನ್ 3ರಂದು ರಜಾಕಾಲದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠವು ಹೇಳಿದೆ.</p>.<p>ಸಿಬಿಐ ಪರವಾಗಿ ಕೋರ್ಟ್ನಲ್ಲಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ‘11 ಮಕ್ಕಳ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ, ಸಮಾಧಿ ಸ್ಥಳದಿಂದ ಕೆಲ ಮೂಳೆಗಳನ್ನು ವಶಪಡಿಸಿಕೊಂಡಿದೆ. ಆದಾಗ್ಯೂ ಈ ಪ್ರಕರಣದ ತನಿಖೆ ಜೂನ್ 3ರೊಳಗೆ ಮುಗಿಯುವ ಸಾಧ್ಯತೆ ಕಡಿಮೆ’ ಎಂದರು.</p>.<p>11 ಬಾಲಕಿಯರೂ ಪ್ರಮುಖ ಆರೋಪಿ ಬ್ರಿಜೇಶ್ ಠಾಕೂರ್ ಮತ್ತು ಆತನ ಸಹವರ್ತಿಗಳಿಂದಲೇ ಕೊಲೆಯಾಗಿದ್ದಾರೆ. ಬಾಲಕಿಯರನ್ನು ಸಮಾಧಿ ಮಾಡಲಾದ ಸ್ಥಳಗಳಿಂದ ರಾಶಿ ರಾಶಿ ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಮೇ 3ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದ ಮುಜಫ್ಫರ್ಪುರ ಬಾಲಿಕಾ ಗೃಹದಲ್ಲಿ ನಡೆದಿದೆ ಎನ್ನಲಾದ 11 ಬಾಲಕಿಯರ ಹತ್ಯೆಗೆ ಸಂಬಂಧಿಸಿದ ತನಿಖಾ ವರದಿಯ ವಸ್ತುಸ್ಥಿತಿ ವರದಿಯನ್ನು ಜೂನ್ 3ರೊಳಗೆ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.</p>.<p>ಪ್ರಕರಣದ ತುರ್ತು ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೂನ್ 3ರಂದು ರಜಾಕಾಲದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠವು ಹೇಳಿದೆ.</p>.<p>ಸಿಬಿಐ ಪರವಾಗಿ ಕೋರ್ಟ್ನಲ್ಲಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ‘11 ಮಕ್ಕಳ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ, ಸಮಾಧಿ ಸ್ಥಳದಿಂದ ಕೆಲ ಮೂಳೆಗಳನ್ನು ವಶಪಡಿಸಿಕೊಂಡಿದೆ. ಆದಾಗ್ಯೂ ಈ ಪ್ರಕರಣದ ತನಿಖೆ ಜೂನ್ 3ರೊಳಗೆ ಮುಗಿಯುವ ಸಾಧ್ಯತೆ ಕಡಿಮೆ’ ಎಂದರು.</p>.<p>11 ಬಾಲಕಿಯರೂ ಪ್ರಮುಖ ಆರೋಪಿ ಬ್ರಿಜೇಶ್ ಠಾಕೂರ್ ಮತ್ತು ಆತನ ಸಹವರ್ತಿಗಳಿಂದಲೇ ಕೊಲೆಯಾಗಿದ್ದಾರೆ. ಬಾಲಕಿಯರನ್ನು ಸಮಾಧಿ ಮಾಡಲಾದ ಸ್ಥಳಗಳಿಂದ ರಾಶಿ ರಾಶಿ ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಮೇ 3ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>