ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಜನವರಿ22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ನೀಡಿದ ವಾರಂಟ್ ಅನ್ನು ಅತ್ಯಾಚಾರ ಸಂತ್ರಸ್ತೆ ನಿರ್ಭಯಾಳ ಅಮ್ಮ ಸ್ವಾಗತಿಸಿದ್ದಾರೆ.
ನನ್ನ ಮಗಳಿಗೆ ನ್ಯಾಯ ಸಿಕ್ಕಿತು. ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ದೇಶದಲ್ಲಿನ ಮಹಿಳೆಯರಿಗೆ ಶಕ್ತಿ ತುಂಬುತ್ತದೆ. ಈ ನಿರ್ಧಾರವು ನ್ಯಾಯಾಂಗ ವ್ಯವಸ್ಥೆ ಬಗ್ಗೆ ಜನರಲ್ಲಿ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದು ನಿರ್ಭಯಾಳ ಅಮ್ಮ ಆಶಾದೇವಿ ಹೇಳಿದ್ದಾರೆ.