<p><strong>ಮುಂಬೈ:</strong> ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ನನ್ನ ಹಿಂದುತ್ವದ ಸಿದ್ಧಾಂತವು ಬಿಜೆಪಿ ಹಿಂದುತ್ವಕ್ಕಿಂತ ಭಿನ್ನವಾಗಿದೆ ಎಂದು ಹೇಳಿದ್ದಾರೆ.</p>.<p>ಧರ್ಮದ ಹೆಸರೇಳಿಕೊಂಡು ಅಧಿಕಾರವನ್ನು ಹಿಡಿಯುವುದು ನನ್ನ ಹಿಂದುತ್ವದ ಮಾದರಿಯಲ್ಲ. ನಾವಿಬ್ಬರು ಒಂದೇ ಯೋಚನಾ ಪ್ರಕ್ರಿಯೆಯನ್ನು ಹೊಂದಿಲ್ಲ. ಶಾಂತಿಯುತವಾಗಿಲ್ಲದ ಹಿಂದು ರಾಷ್ಟ್ರವು ನನಗೆ ಬೇಕಾಗಿಲ್ಲ. ಧರ್ಮವನ್ನು ಬಳಸಿಕೊಳ್ಳುವುದು ಮತ್ತು ಅಧಿಕಾರ ಹಿಡಿಯುವುದು ನನ್ನ ಹಿಂದುತ್ವವಲ್ಲ ಎಂದು ಹೇಳಿದ್ದಾರೆ.</p>.<p>ಒಬ್ಬರನ್ನು ಮತ್ತೊಬ್ಬರು ಕೊಲ್ಲುವುದು ಮತ್ತು ದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸುವುದು ಕೂಡ ನನ್ನ ಹಿಂದೂರಾಷ್ಟ್ರದ ಮಾದರಿಯಲ್ಲ ಎಂದು ಕಿಡಿಕಾರಿದ್ದಾರೆ.</p>.<p>ಇದಕ್ಕೂ ಮುನ್ನ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯು ಜನರನ್ನು ಪೌರತ್ವ ಹಕ್ಕಿನಿಂದ ವಂಚಿತರನ್ನಾಗಿಸುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.</p>.<p>ಶಿವಸೇನಾದ ಮುಖವಾಣಿ ಸಾಮ್ನಾದಲ್ಲಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯು ನಾಗರಿಕತ್ವದಿಂದ ಜನರನ್ನು ದೂರ ಕರೆದೊಯ್ಯುವುದಲ್ಲ. ಬದಲಿಗೆ ನೆರೆಯ ರಾಷ್ಟ್ರಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಾಗಿದೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ನನ್ನ ಹಿಂದುತ್ವದ ಸಿದ್ಧಾಂತವು ಬಿಜೆಪಿ ಹಿಂದುತ್ವಕ್ಕಿಂತ ಭಿನ್ನವಾಗಿದೆ ಎಂದು ಹೇಳಿದ್ದಾರೆ.</p>.<p>ಧರ್ಮದ ಹೆಸರೇಳಿಕೊಂಡು ಅಧಿಕಾರವನ್ನು ಹಿಡಿಯುವುದು ನನ್ನ ಹಿಂದುತ್ವದ ಮಾದರಿಯಲ್ಲ. ನಾವಿಬ್ಬರು ಒಂದೇ ಯೋಚನಾ ಪ್ರಕ್ರಿಯೆಯನ್ನು ಹೊಂದಿಲ್ಲ. ಶಾಂತಿಯುತವಾಗಿಲ್ಲದ ಹಿಂದು ರಾಷ್ಟ್ರವು ನನಗೆ ಬೇಕಾಗಿಲ್ಲ. ಧರ್ಮವನ್ನು ಬಳಸಿಕೊಳ್ಳುವುದು ಮತ್ತು ಅಧಿಕಾರ ಹಿಡಿಯುವುದು ನನ್ನ ಹಿಂದುತ್ವವಲ್ಲ ಎಂದು ಹೇಳಿದ್ದಾರೆ.</p>.<p>ಒಬ್ಬರನ್ನು ಮತ್ತೊಬ್ಬರು ಕೊಲ್ಲುವುದು ಮತ್ತು ದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸುವುದು ಕೂಡ ನನ್ನ ಹಿಂದೂರಾಷ್ಟ್ರದ ಮಾದರಿಯಲ್ಲ ಎಂದು ಕಿಡಿಕಾರಿದ್ದಾರೆ.</p>.<p>ಇದಕ್ಕೂ ಮುನ್ನ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯು ಜನರನ್ನು ಪೌರತ್ವ ಹಕ್ಕಿನಿಂದ ವಂಚಿತರನ್ನಾಗಿಸುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.</p>.<p>ಶಿವಸೇನಾದ ಮುಖವಾಣಿ ಸಾಮ್ನಾದಲ್ಲಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯು ನಾಗರಿಕತ್ವದಿಂದ ಜನರನ್ನು ದೂರ ಕರೆದೊಯ್ಯುವುದಲ್ಲ. ಬದಲಿಗೆ ನೆರೆಯ ರಾಷ್ಟ್ರಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಾಗಿದೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>