ನವದೆಹಲಿ: ಗಡಿ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ದೇಶವನ್ನು ವಿಭಜಿಸುವಂತಹ ಹೇಳಿಕೆ ನೀಡುತ್ತಿದ್ದು, ಸಶಸ್ತ್ರ ಪಡೆಗಳ ಸ್ಥೈರ್ಯಗುಂದಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಆರೋಪಿಸಿದ್ದಾರೆ. ‘ರಾಹುಲ್ ಅವರ ಈ ನಡೆಯು ಚೀನಾದ ಕಮ್ಯುನಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ಒಡಂಬಡಿಕೆಯ ಪರಿಣಾಮವೇ?’ ಎಂದು ಅವರು ಪ್ರಶ್ನಿಸಿದ್ದಾರೆ.