<p><strong>ಜೈಪುರ: </strong>ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟವನ್ನು ಬೆಂಬಲಿಸಿರುವ ನಟಿ ನಂದಿತಾ ದಾಸ್, ಕಾಯ್ದೆಗೆ ತೀವ್ರ ಪ್ರತಿರೋಧ ತೋರುವಂತಹ ‘ಶಹೀನ್ ಬಾಗ್‘ ಸ್ವರೂಪದ ಪ್ರದೇಶಗಳು ದೇಶದ ಎಲ್ಲ ಕಡೆಗಳಲ್ಲಿ ಸೃಷ್ಟಿಯಾಗಲಿವೆ ಎಂದು ಭವಿಷ್ಯ ನುಡಿದರು.</p>.<p>ಜೈಪುರ ಸಾಹಿತ್ಯ ಸಮ್ಮೇಳನದ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ‘ನಾಲ್ಕು ತಲೆಮಾರುಗಳಿಂದಲೂ ಇಲ್ಲಿ ನೆಲೆಸಿರುವ ಜನರಿಗೆ ತಾವು ಭಾರತೀಯರು ಎಂಬುದನ್ನು ನಿರೂಪಿಸುವಂತೆ ಸರ್ಕಾರ ಕೇಳುತ್ತಿದೆ. ಈ ಧೋರಣೆ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಆರ್ಥಿಕ ಹಿಂಜರಿತ, ನಿರುದ್ಯೋಗ ಹೆಚ್ಚಳ ಹಾಗೂ ಧರ್ಮದ ಆಧಾರದ ಮೇಲೆ ಜನರನ್ನು ಒಡೆದಾಳುವ ನೀತಿಯಿಂದಾಗಿ ಭಾರತ ಈಗ ಜಗತ್ತಿನೆಲ್ಲಡೆ ಸುದ್ದಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ನಮ್ಮ ಸಂವಿಧಾನ ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ಧರ್ಮ, ಲಿಂಗ ಆಧಾರದ ಪ್ರತ್ಯೇಕತೆಯನ್ನು ನಾವು ಬಯಸುವುದಿಲ್ಲ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.</p>.<p><em><strong>ಜೈಪುರ ಸಾಹಿತ್ಯ ಸಮ್ಮೇಳನದ ಒಂದು ನೋಟ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟವನ್ನು ಬೆಂಬಲಿಸಿರುವ ನಟಿ ನಂದಿತಾ ದಾಸ್, ಕಾಯ್ದೆಗೆ ತೀವ್ರ ಪ್ರತಿರೋಧ ತೋರುವಂತಹ ‘ಶಹೀನ್ ಬಾಗ್‘ ಸ್ವರೂಪದ ಪ್ರದೇಶಗಳು ದೇಶದ ಎಲ್ಲ ಕಡೆಗಳಲ್ಲಿ ಸೃಷ್ಟಿಯಾಗಲಿವೆ ಎಂದು ಭವಿಷ್ಯ ನುಡಿದರು.</p>.<p>ಜೈಪುರ ಸಾಹಿತ್ಯ ಸಮ್ಮೇಳನದ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ‘ನಾಲ್ಕು ತಲೆಮಾರುಗಳಿಂದಲೂ ಇಲ್ಲಿ ನೆಲೆಸಿರುವ ಜನರಿಗೆ ತಾವು ಭಾರತೀಯರು ಎಂಬುದನ್ನು ನಿರೂಪಿಸುವಂತೆ ಸರ್ಕಾರ ಕೇಳುತ್ತಿದೆ. ಈ ಧೋರಣೆ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಆರ್ಥಿಕ ಹಿಂಜರಿತ, ನಿರುದ್ಯೋಗ ಹೆಚ್ಚಳ ಹಾಗೂ ಧರ್ಮದ ಆಧಾರದ ಮೇಲೆ ಜನರನ್ನು ಒಡೆದಾಳುವ ನೀತಿಯಿಂದಾಗಿ ಭಾರತ ಈಗ ಜಗತ್ತಿನೆಲ್ಲಡೆ ಸುದ್ದಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ನಮ್ಮ ಸಂವಿಧಾನ ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ಧರ್ಮ, ಲಿಂಗ ಆಧಾರದ ಪ್ರತ್ಯೇಕತೆಯನ್ನು ನಾವು ಬಯಸುವುದಿಲ್ಲ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.</p>.<p><em><strong>ಜೈಪುರ ಸಾಹಿತ್ಯ ಸಮ್ಮೇಳನದ ಒಂದು ನೋಟ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>