ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾವಿಷ್ಣುವಿನ 11 ನೇ ಅವತಾರ ಮೋದಿ: ಮಹಾರಾಷ್ಟ್ರದ ಬಿಜೆಪಿ ವಕ್ತಾರ

Last Updated 13 ಅಕ್ಟೋಬರ್ 2018, 6:25 IST
ಅಕ್ಷರ ಗಾತ್ರ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮಹಾ ವಿಷ್ಣುವಿನ 11ನೇ ಅವತಾರ ಎಂದು ಮಹಾರಾಷ್ಟ್ರದ ಬಿಜೆಪಿ ವಕ್ತಾರ ಅವಧೂತ್ ವಾಘ್ ಟ್ವೀಟಿಸಿದ್ದಾರೆ.

ದೇವರಂಥಾ ನಾಯಕ ಸಿಗುವುದಕ್ಕೆ ಈ ದೇಶ ಪುಣ್ಯ ಮಾಡಿದೆ ಎಂದು ಮರಾಠಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿದ ವಾಘ್ ಹೇಳಿದ್ದಾರೆ.ವಾಘ್ ಉಪಮೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಅತುಲ್ ಲೊಂಧೇ, ಮೋದಿಯನ್ನು ದೇವರಿಗೆ ಹೋಲಿಸುವ ಮೂಲಕ ದೇವರಿಗೆ ಅವಮಾನ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಕಳೆದುಕೊಂಡದ್ದನ್ನು ಮರಳಿ ಪಡೆಯಲ ವಾಘ್ ಪ್ರಯತ್ನಿಸುತ್ತಿದ್ದಾರೆ.ಇಂಥಾ ಹೇಳಿಕೆಗಳಿಗೆ ಹೆಚ್ಚು ಪ್ರಾಧಾನ್ಯ ನೀಡುವ ಅಗತ್ಯವಿಲ್ಲ.ಇದು ಬಿಜೆಪಿಯ ಕೆಳಮಟ್ಟದ ಸಂಸ್ಕೃತಿಯನ್ನು ತೋರಿಸುತ್ತದೆ ಎಂದಿದ್ದಾರೆ.

ವಾಘ್ ಅವರು ವಿಜೆಟಿಐನಿಂದ ಇಂಜಿನಿಯರಿಂಗ್ ಪದವಿ ಪಡೆದವರು. ಅವರ ಪದವಿ ಸರ್ಟಿಫಿಕೇಟ್ ನಿಜವೇ ಎಂಬುದನ್ನು ಪರಿಶೀಲಿಸಬೇಕಾದ ಅಗತ್ಯ ಈಗ ಇದೆ.ಅವರಿಂದ ಈ ರೀತಿಯ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ಎನ್‍ಸಿಪಿಶಾಸಕ ಜಿತೇಂದ್ರ ಅವ್ಹಾದ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT